Advertisement

Ramanagara:ಕಬ್ಬಿಣದ ಸರಳು ತುಂಬಿದ್ದ ಟ್ರ್ಯಾಕ್ಟರ್ ಪಲ್ಟಿಯಾಗಿ ಇಬ್ಬರು ಮೃತ್ಯು

07:49 PM Feb 16, 2024 | Team Udayavani |

ರಾಮನಗರ: ಕಬ್ಬಿಣದ ಸರಳು ತುಂಬಿದ್ದ ಟ್ರ್ಯಾಕ್ಟರ್ ಪಲ್ಟಿಯಾಗಿ ಇಬ್ಬರು ದಾರುಣವಾಗಿ ಸಾವನ್ನಪ್ಪಿದ ಘಟನೆ ಕನಕಪುರ – ಸಾತನೂರು ರಸ್ತೆ ಜಕ್ಕೇಗೌಡನ ಗ್ರಾಮದಲ್ಲಿ ನಡೆದಿದೆ.

Advertisement

ಮೃತರು ಕೋಲ್ಕತಾ ಮೂಲದ ಕಾರ್ಮಿಕರಾಗಿದ್ದು, ಮತ್ತೊಬ್ಬ ಚಾಲಕ ಗಂಭೀರವಾಗಿ ಗಾಯಗೊಂಡಿದ್ದಾನೆ.

ಕಾರ್ಮಿಕರು BWSSB ಕುಡಿಯುವ ನೀರು ಪೈಪ್ ಲೈನ್ ಕಾಮಗಾರಿ ಬಂದಿದ್ದು, ಕನಕಪುರದಿಂದ ಜಕ್ಕೇಗೌಡನದೊಡ್ಡಿ ಕಡೆ ಹೋಗುತ್ತಿದ್ದಾಗ ದುರ್ಘಟನೆ ನಡೆದಿದ್ದು ಟ್ರ್ಯಾಕ್ಟರ್ ಮೇಲೆ ಕುಳಿತಿದ್ದ ಇಬ್ಬರ ಮೇಲೆ ಬಿದ್ದಿರುವ ಕಬ್ಬಿಣದ ಸರಳುಗಳು ಬಿದ್ದಿವೆ.

ಸ್ಥಳಕ್ಕೆ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದು ಸಾತನೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next