Advertisement

ರಮೇಶ ಬಿಜೆಪಿ ಸೇರೋದು ಪಕ್ಕಾ

01:25 AM May 25, 2019 | Sriram |

ಬೆಳಗಾವಿ: ಪರೋಕ್ಷವಾಗಿ ಬಿಜೆಪಿ ಬೆಂಬಲಿಸಿರುವ ಗೋಕಾಕ ಶಾಸಕ ರಮೇಶ ಜಾರಕಿಹೊಳಿ ಬಿಜೆಪಿ ಸೇರ್ಪಡೆ ಆಗುವುದು ಪಕ್ಕಾ ಎಂದು ನಾಲ್ಕನೇ ಬಾರಿ ಗೆಲುವು ಸಾಧಿಸಿದ ಬಿಜೆಪಿ ಸಂಸದ ಸುರೇಶ ಅಂಗಡಿ ಹೇಳಿದರು.

Advertisement

ನಗರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗೋಕಾಕ ವಿಧಾನಸಭೆ ಕ್ಷೇತ್ರದಲ್ಲಿ ಬಿಜೆಪಿಗೆ ಹೆಚ್ಚಿನ ಅಂತರ ಸಿಕ್ಕಿದೆ. ಈ ಬಗ್ಗೆ ಶಾಸಕ ರಮೇಶ ಜಾರಕಿಹೊಳಿಗೆ ಅಭಿನಂದನೆ ಸಲ್ಲಿಸುತ್ತೇವೆ.

ರಮೇಶ ಹಾಗೂ ತಮ್ಮ ಮಧ್ಯೆ ಅನೇಕ ವರ್ಷಗಳಿಂದ ಒಡನಾಟವಿದೆ. ರಾಜಕೀಯವಾಗಿ ನಾವು ವೈರಿಗಳಾಗಿದ್ದೇವೆ ಹೊರತು ವೈಯಕ್ತಿಕ ವೈರಿಗಳಲ್ಲ ಎಂದು ಹೇಳಿದರು. ರಮೇಶ ಕಾಂಗ್ರೆಸ್‌ನ ನಿಷ್ಠಾವಂತ ಕಾರ್ಯ ಕರ್ತರು. ಆದರೆ ಅವರನ್ನು ಪಕ್ಷದಲ್ಲಿ ನಿರ್ಲಕ್ಷಿಸಲಾಗುತ್ತಿದೆ. ಇದು ಅವರ ಸ್ವಾಭಿಮಾನಕ್ಕೆ ಧಕ್ಕೆ ತಂದಿದ್ದು, ಹೀಗಾಗಿ ಬಿಜೆಪಿಯ ರಾಷ್ಟ್ರೀಯ ವರಿಷ್ಠರೊಂದಿಗೆ ಸಂಪರ್ಕದಲ್ಲಿದ್ದಾರೆ. ಬಿಜೆಪಿಗೆ ಬರುವ ಸಾಧ್ಯತೆ ಇದೆ ಎಂದು ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next