Advertisement

ರಮೇಶ್‌ ಕಾಂಗ್ರೆಸ್‌ ಪರ ಕೆಲಸ ಮಾಡಿಲ್ಲ: ಸತೀಶ್‌

01:29 AM May 25, 2019 | Sriram |

ಬೆಂಗಳೂರು: ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ ಬಂಡಾಯ ಶಾಸಕ ರಮೇಶ್‌ ಜಾರಕಿಹೊಳಿ ಪಕ್ಷದ ಅಭ್ಯರ್ಥಿಗಳ ಪರ ಕೆಲಸ ಮಾಡಿಲ್ಲ ಎಂದು ಅರಣ್ಯ ಸಚಿವ ಸತೀಶ್‌ ಜಾರಕಿಹೊಳಿ ಹೇಳಿದ್ದಾರೆ.

Advertisement

ಮುಖ್ಯಮಂತ್ರಿ ಗೃಹ ಕಚೇರಿ ಕೃಷ್ಣಾದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿ, ಬೆಳಗಾವಿಯಲ್ಲಿ ಸೋಲುವ ನಿರೀಕ್ಷೆಯಿತ್ತು. ಚಿಕ್ಕೋಡಿಯಲ್ಲಿ ಗೆಲ್ಲುವ ವಿಶ್ವಾಸವಿತ್ತು. ಆದರೆ, ರಮೇಶ್‌ ಜಾರಕಿಹೊಳಿ ಪಕ್ಷದ ಅಭ್ಯರ್ಥಿ ಪರ ಕೆಲಸ ಮಾಡದಿರುವುದು ಸೋಲಿಗೆ ಕಾರಣವಾಗಿದೆ ಎಂದು ಹೇಳಿದರು.

ರಮೇಶ್‌ ಈಗಾಗಲೇ ಮಾನಸಿಕವಾಗಿ ಕಾಂಗ್ರೆಸ್‌ನಿಂದ ದೂರ ಹೋಗಿದ್ದಾರೆ. ಅವರು ಯಾವಾಗ ಬೇಕಾದರೂ ರಾಜೀನಾಮೆ ನೀಡುವ ಸಾಧ್ಯತೆ ಇದೆ. ಬಿಜೆಪಿಯವರು ಹೆಚ್ಚಿನ ಸ್ಥಾನ ಗೆದ್ದಿರುವುದರಿಂದ ಮತ್ತೆ ಆಪರೇಷನ್‌ ಕಮಲ ಮಾಡುವ ಸಾಧ್ಯತೆಯಿದೆ. ಅವರಿಗೆ 10 ಶಾಸಕರ ರಾಜೀನಾಮೆ ಪಡೆಯುವ ಅಗತ್ಯವಿದೆ. ಅಷ್ಟೊಂದು ಶಾಸಕರು ಕಾಂಗ್ರೆಸ್‌ ತೊರೆಯುವುದಿಲ್ಲ. ಅದಕ್ಕೆ ನಾವು ಅವಕಾಶ ಕೊಡುವುದಿಲ್ಲ. ಹೀಗಾಗಿ ಮೈತ್ರಿ ಪಕ್ಷಕ್ಕೆ ಯಾವುದೇ ತೊಂದರೆಯಿಲ್ಲ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next