Advertisement

ಸಚಿವ ಸ್ಥಾನದಿಂದ ಕೆಳಗಿಳಿದ ಜಾರಕಿಹೊಳಿ ಶಾಸಕ ಸ್ಥಾನವೂ ತ್ಯಾಗ?

03:12 AM Jun 22, 2021 | Team Udayavani |

ಗೋಕಾಕ : ಸಿ.ಡಿ. ಪ್ರಕರಣದಲ್ಲಿ ಸಿಲುಕಿ ನೈತಿಕ ಹೊಣೆ ಹೊತ್ತು ಸಚಿವ ಸ್ಥಾನದಿಂದ ಕೆಳಗಿಳಿದ ಬಳಿಕ ಪಕ್ಷದಲ್ಲಿ ತಮ್ಮನ್ನು ಕಡೆಗಣಿಸಲಾಗುತ್ತಿದೆ ಎಂದು ಬೇಸರಿಸಿರುವ ಶಾಸಕ ರಮೇಶ ಜಾರಕಿಹೊಳಿ ಶಾಸಕ ಸ್ಥಾನಕ್ಕೂ ರಾಜೀನಾಮೆ ನೀಡಲು ಚಿಂತನೆ ನಡೆಸಿದ್ದಾರೆ.

Advertisement

ಸದ್ಯ ಮುಂಬಯಿಯಲ್ಲಿರುವ ಅವರು ಸೋಮವಾರ ಮಹಾರಾಷ್ಟ್ರದ ಮಾಜಿ ಸಿಎಂ ದೇವೇಂದ್ರ ಫಡ್ನವೀಸ್‌ ಅವರನ್ನು ಭೇಟಿ ಮಾಡಿ ಚರ್ಚಿಸಿದ್ದು, ಅವರ ಮೂಲಕ ಪಕ್ಷದ ವರಿಷ್ಠರಿಗೆ ಸಂದೇಶ ಮುಟ್ಟಿಸಿದ್ದಾರೆ ಎನ್ನಲಾಗಿದೆ.

ಸರಕಾರಕ್ಕೆ ಎಚ್ಚರಿಕೆ ನೀಡುವ ಪ್ರಯತ್ನವಾಗಿ 10ಕ್ಕೂ ಹೆಚ್ಚು ಶಾಸಕರು ತಮ್ಮ ಜತೆ ಬರುವಂತೆ ಪ್ರಯತ್ನ ನಡೆಸಿದ್ದಾರೆ. ಜೂ. 23ರಂದು ಬೆಂಗಳೂರಿಗೆ ಬಂದು ರಾಜೀನಾಮೆ ಸಲ್ಲಿಸುವ ಸಾಧ್ಯತೆಗಳಿವೆ. ಬಳಿಕ ಇನ್ನುಳಿದ ಆಪ್ತರಿಂದ ರಾಜೀನಾಮೆ ಕೊಡಿಸಲು ನಿರ್ಧರಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

Advertisement

Udayavani is now on Telegram. Click here to join our channel and stay updated with the latest news.

Next