Advertisement

CD ಕೇಸ್ : ಕನಕಪುರದಲ್ಲಿ ಡಿಕೆಶಿ ಸೋಲಿಸಲು ಹೋರಾಡ್ತೇನೆ : ರಮೇಶ್ ಜಾರಕಿಹೊಳಿ

06:45 PM Mar 27, 2021 | Team Udayavani |

ಬೆಂಗಳೂರು: ಸಿಡಿ ಪ್ರಕರಣದ ಕುರಿತು ಇಂದು ಮಾಜಿ ಸಚಿವ ರಮೇಶ್​ ಜಾರಕಿಹೊಳಿ ಸುದ್ದಿಗೋಷ್ಠಿ ನಡೆಸಿದ್ದಾರೆ. ಇಂದು ಸದಾಶಿವನಗರದ ತಮ್ಮ ನಿವಾಸದಲ್ಲಿ ಮಾಧ್ಯಮಗೋಷ್ಠಿ ನಡೆಸಿದ್ದಾರೆ.

Advertisement

ನನ್ನ ಬಳಿ 11 ಸಾಕ್ಷ್ಯಗಳಿವೆ. ಮಹಾನಾಯಕ ಯಾರೆಂದು ಪೋಷಕರು ಬಹಿರಂಗಗೊಳಿದ್ದಾರೆ. ಮಹಾನಾಯಕ ರಾಜಕೀಯದಲ್ಲಿರಲು ನಾಲಾಯಕ್​ ಎಂದು ಹೇಳುವ ಮೂಲಕ ಡಿಕೆಶಿ ವಿರುದ್ಧ ನೇರ ವಾಗ್ದಾಳಿ ನಡೆಸಿದ್ದಾರೆ.

ನಮ್ಮ ಕುಟುಂಬದವರು ಯಾವ ಹುಡುಗಿ ಮೂಸಿಯೂ ನೋಡಿಲ್ಲ. ಕನಕಪುರದಲ್ಲಿ ಅವನನ್ನು ಸೋಲಿಸಲು ಹೋರಾಟ ಮಾಡ್ತೇನೆ. ಡಿ.ಕೆ.ಶಿ​ ಬೆಳಗಾವಿಗೆ ಬಂದ್ರೆ ವೆಲ್ ಕಂ ಮಾಡುತ್ತೇನೆ. ಇಲ್ಲಿಂದ ಮರ್ಯಾದೆಯಿಂದ ಕಳಿಸಿಕೊಡುತ್ತೇವೆ ಎಂದು ರಮೇಶ್​ ಜಾರಕಿಹೊಳಿ ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next