Advertisement

ದತ್ತಾತ್ರೇಯನ ದರ್ಶನ ಪಡೆದ ಸಚಿವ ರಮೇಶ ಜಾರಕಿಹೊಳಿ

11:41 AM Jul 02, 2020 | sudhir |

ಕಲಬುರಗಿ: ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಅವರು ಗುರುವಾರ ಬೆಳಿಗ್ಗೆ ಜಿಲ್ಲೆಯ ಅಫಜಲಪುರ ತಾಲೂಕಿನ ಪ್ರಸಿದ್ಧ ದೇವಲಗಣಗಾಪುರದ ದತ್ತಾತ್ರೇಯ ದರ್ಶನ ಪಡೆದರು.

Advertisement

ದತ್ತನ ಪಾದುಕೆಗಳ ದರ್ಶನ ಪಡೆದ ಸಚಿವರು, ವಿಶೇಷ ಪೂಜೆ ಸಲ್ಲಿಸಿದರು. ಸಂಸದ ಡಾ.ಉಮೇಶ ಜಾಧವ್, ಶಾಸಕರಾದ ಬಸವರಾಜ ಮತ್ತಮಡು, ರಾಜುಗೌಡ, ಮಾಜಿ ಸಚಿವ ಮಾಲೀಕಯ್ಯ ಗುತ್ತೇದಾರ, ಮಹೇಶ ಕುಮಟಹಳ್ಳಿ ಮೊದಲಾದವರು ಇದ್ದರು.

ತಾಲೂಕಿನ ಸೊನ್ನ ಬ್ಯಾರೇಜ್ ಗೆ ಭೇಟಿ ನೀಡಿ, ತದನಂತರ ಬಳ್ಳೂಂಡಗಿ ಮತ್ತು ಬೋರಿ ಏತ ನೀರಾವರಿ ಕಾಮಗಾರಿಗಳನ್ನು ಸಚಿವ ರಮೇಶ ಜಾರಕಿಹೊಳಿ ವೀಕ್ಷಿಸುವರು.

Advertisement

Udayavani is now on Telegram. Click here to join our channel and stay updated with the latest news.

Next