Advertisement

ಅರುಣ್ ಸಿಂಗ್ ರಾಜ್ಯಕ್ಕೆ ಬಂದು ಹೋದ ಮೇಲೆ ದಿಢೀರ್ ಮುಂಬೈಗೆ ತೆರಳಿದ ರಮೇಶ್ ಜಾರಕಿಹೊಳಿ

02:43 PM Jun 20, 2021 | Team Udayavani |

ಬೆಳಗಾವಿ : ‌ ರಾಜ್ಯದ ಉಸ್ತುವಾರಿ ಅರುಣಸಿಂಗ್ ಬಂದು ಹೋದ ಮೇಲೆ ಬಿಜೆಪಿ ಯಲ್ಲಿ ಗೊಂದಲಗಳು ಬಗೆಹರಿದವು ಎನ್ನುವಾಗಲೇ ಮಾಜಿ ಸಚಿವ ರಮೇಶ ಜಾರಕಿಹೊಳಿ ಭಾನುವಾರ ಮುಂಬೈಗೆ ತೆರಳಿರುವುದು ನಾನಾ ರೀತಿಯ ರಾಜಕೀಯ ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ.

Advertisement

ಈ ಹಿಂದೆ ಮುಂಬೈದಲ್ಲೇ ಬೀಡುಬಿಟ್ಟು ಸಮ್ಮಿಶ್ರ ಸರಕಾರದ ಪತನಕ್ಕೆ ಕಾರಣರಾಗಿದ್ದ ರಮೇಶ ಜಾರಕಿಹೊಳಿ ಈಗ ಬಿ ಜೆ ಪಿ ವಿರುದ್ಧ ಸಹ ಇದೇ ರೀತಿಯ ಕಾರ್ಯತಂತ್ರ ಅನುಸರಿಸುತ್ತಿದ್ದಾರೆ ಎಂಬ ಮಾತುಗಳು ಕೇಳುತ್ತಿರುವಾಗಲೇ ದಿಢೀರನೆ ಮುಂಬೈಗೆ ಹಾರಿರುವದು ಈ ಅನುಮಾನಗಳಿಗೆ ಪುಷ್ಟಿ ನೀಡಿದೆ.

ಮೂಲಗಳ ಪ್ರಕಾರ ರಮೇಶ ಜಾರಕಿಹೊಳಿ ಜೊತೆ ಇನ್ನೂ ಐದಕ್ಕೂ ಹೆಚ್ಚು ಶಾಸಕರು ಮುಂಬೈಗೆ ತೆರಳಲಿದ್ದಾರೆ ಎಂಬ ಮಾತುಗಳು ದಟ್ಟವಾಗಿ ಕೇಳಿಬರುತ್ತಿವೆ. ಈ ಮೂಲಕ ಸರಕಾರದ ಮೇಲೆ ಸಂಪುಟ ಪುನಾರಚನೆ ಮಾಡುವಂತೆ ಒತ್ತಡ ಹೇರುವ ತಂತ್ರವೂ ಇದರ ಹಿಂದಿದೆ ಎನ್ನಲಾಗುತ್ತಿದೆ.

ತಮ್ಮ ವಿರುದ್ಧ ಸರಕಾರದಲ್ಲಿದ್ದವರೇ ಕುತಂತ್ರ ನಡೆಸಿದ್ದಾರೆ. ಅವರಿಂದಲೇ ತಾವು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕಾಯಿತು ಎಂದು ಅಸಮಾಧಾನ ಗೊಂಡಿರುವ ರಮೇಶ ಜಾರಕಿಹೊಳಿ ಈಗ ಮತ್ತೊಮ್ಮೆ ತಮ್ಮ ಶಕ್ತಿ ಪ್ರದರ್ಶಿಸಲು ಮುಂದಾಗಿದ್ದಾರೆ ಎನ್ನಲಾಗುತ್ತಿದೆ. ಇನ್ನೊಂದು ಕಡೆ ಪ್ರಸಂಗ ಬಂದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಗೋಕಾಕದಿಂದ ತಮ್ಮ ಪುತ್ರ ಅಮರನಾಥ ಅವರನ್ನು ಕಣಕ್ಕಿಳಿಸಲು ಸಹ ರಮೇಶ ಚಿಂತನೆ ಮಾಡಿದ್ದಾರೆ ಎಂದು ಅವರ ಆಪ್ತ ಮೂಲಗಳು ಹೇಳಿವೆ.

Advertisement

Udayavani is now on Telegram. Click here to join our channel and stay updated with the latest news.

Next