Advertisement

ರಾಜೀನಾಮೆ ವಿಚಾರ ಮುಂಬೈನಲ್ಲಿ ಹೇಳುತ್ತೇನೆ: ಬಂಡಾಯದ ಎಚ್ಚರಿಕೆ ನೀಡಿದ ರಮೇಶ್ ಜಾರಕಿಹೊಳಿ

01:13 PM Jun 25, 2021 | Team Udayavani |

ಮೈಸೂರು: ನಾನು ಸುತ್ತೂರು ಮಠಕ್ಕೆ ಭೇಟಿ ನೀಡುತ್ತಿರುವುದು ಸ್ವಾಮೀಜಿಯವರನ್ನು ಭೇಟಿ ಮಾಡಲಷ್ಟೇ. ಅದರಲ್ಲಿ ರಾಜಕೀಯವೇನಿಲ್ಲ. ನಾನು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವ ವಿಚಾರ ಮುಂಬೈ‌ನಲ್ಲಿ ತೀರ್ಮಾನ ಆಗಲಿದೆ ಎಂದು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಹೇಳಿದರು.

Advertisement

ಮೈಸೂರು ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸದ್ಯಕ್ಕೆ ಇಲ್ಲಿ ಬಂದಿರೋದು ಸ್ವಾಮೀಜಿಯನ್ನು ಭೇಟಿ ಮಾಡಲು ಮಾತ್ರ. ಅವರ ತಾಯಿ ದೈವಾಧೀನರಾಗಿದ್ದರು. ಅದಕ್ಕಾಗಿ ಬಂದಿದ್ದೇನೆ. ರಾಜಕೀಯ ಭೇಟಿಯಲ್ಲ ಎಂದರು.

ಇದನ್ನೂ ಓದಿ:ದೆಹಲಿಗೆ ಹಾರಿದ ವಿಜಯೇಂದ್ರ: ಯಡಿಯೂರಪ್ಪ ಭೇಟಿಯಾದ ಭೂಪೇಂದ್ರ ಯಾದವ್!

ನಾನು ಮುಂಬಯಿಗೆ ಹೋಗಿರೋದು ರಾಜಕೀಯ ಇರಬಹುದು. ಸರ್ಕಾರ ತಂದವನು ನಾನು, ನಾನು ಮಂತ್ರಿ ಸ್ಥಾನ ಕೇಳುತ್ತೇನೆ. ಆದರೆ ಮಂತ್ರಿಗೋಸ್ಕರ ನಾನು ಸ್ವಾಮೀಜಿಯನ್ನ ಭೇಟಿ ಮಾಡುತ್ತಿಲ್ಲ. ರಾಜೀನಾಮೆ ವಿಚಾರ ಮುಂಬೈನಲ್ಲಿ ಹೋಗಿ ಮಾತಾಡುತ್ತೇನೆ ಎಂದು ಪರೋಕ್ಷವಾಗಿ ರಾಜೀನಾಮೆ ನೀಡುವ ಎಚ್ಚರಿಕೆ ನೀಡಿದರು.

ಮುಖ್ಯಮಂತ್ರಿಗಳು ಭೇಟಿಯಾಗಲು ಹೇಳಿದ್ದಾರೆ ಎಂಬ ಪ್ರಶ್ನೆಗೆ ಉತ್ತರಿಸಿದ ರಮೇಶ್ ಜಾರಕಿಹೊಳಿ, ಸಿಎಂ ಬಂದು ಭೇಟಿ ಮಾಡಿ ಎಂದಿರುವುದು ನನಗೆ ಗೊತ್ತಿಲ್ಲ ಎಂದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next