Advertisement

ಕೊನೆಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಪಟ್ಟವೇರಿದ ರಮೇಶ್ ಜಾರಕಿಹೊಳಿ

01:33 PM Jun 02, 2020 | keerthan |

ಬೆಂಗಳೂರು: ಬೃಹತ್ ಮತ್ತು ಮಧ್ಯಮ ನೀರಾವರಿ ಸಚಿವ ರಮೇಶ್ ಜಾರಕಿಹೊಳಿಗೆ ಕೊನೆಗೂ ಬೆಳಗಾವಿ ಉಸ್ತುವಾರಿ ಸಚಿವ ಸ್ಥಾನ ನೀಡಲಾಗಿದೆ. ಇಂದರೊಂದಿಗೆ ಕೆ ಗೋಪಾಲಯ್ಯ ಅವರಿಗೆ ಹಾಸನ ಜಿಲ್ಲೆಯ ಉಸ್ತುವಾರಿ ಸಚಿವರನ್ನಾಗಿ ನೇಮಿಸಲಾಗಿದೆ.

Advertisement

ಈ ಹಿಂದಿನ ಸಚಿವ ಸಂಪುಟ ವಿಸ್ತರಣೆಯಲ್ಲಿ ರಮೇಶ್ ಜಾರಕಿಹೊಳಿ, ಕೆ. ಗೋಪಾಲಯ್ಯ ಮತ್ತು ಶ್ರೀಮಂತ ಪಾಟೀಲ್ ಗೆ ಯಾವುದೇ ಜಿಲ್ಲಾ ಉಸ್ತುವಾರಿ ನೀಡಲಾಗಿರಲಿಲ್ಲ. ಸದ್ಯ ಜಾರಕಿಹೊಳಿ ಮತ್ತು ಕೆ ಗೋಪಾಲಯ್ಯಗೆ ಉಸ್ತುವಾರಿಗಿರಿ ನೀಡಿದ್ದು, ಶ್ರೀಮಂತ ಪಾಟೀಲ್ ಒಬ್ಬರು ಬಾಕಿ ಆದಂತಾಗಿದೆ.

ಈ ಹಿಂದೆ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ್ ಶೆಟ್ಟರ್ ಅವರನ್ನೇ ಬೆಳಗಾವಿಯ ಉಸ್ತುವಾರಿಗೂ ನೇಮಿಸಲಾಗಿತ್ತು. ಬೆಳಗಾವಿ ಬಿಜೆಪಿಯಲ್ಲಿ ನಡೆಯುತ್ತಿರುವ ಮುಸುಕಿನ ಗುದ್ದಾಟದ ನಡುವೆಯೇ ರಮೇಶ್ ಜಾರಕಿಹೊಳಿಗೆ ಉಸ್ತುವಾರಿಗಿರಿ ನೀಡಿದ್ದು, ಹಲವು ರಾಜಕೀಯ ಲೆಕ್ಕಾಚಾರಗಳ ಆರಂಭಕ್ಕೆ ಕಾರಣವಾಗಿದೆ.

ಈ ಹಿಂದೆ ಹಾಸನ ಜಿಲ್ಲೆಯ ಉಸ್ತುವಾರಿಯನ್ನು ಜೆ ಮಾಧುಸ್ವಾಮಿಯವರಿಗೆ ನೀಡಲಾಗಿತ್ತು. ಮಾಧುಸ್ವಾಮಿಯವರು ತುಮಕೂರು ಜಿಲ್ಲೆಗೂ ಉಸ್ತುವಾರಿ ಸಚಿವರಾಗಿದ್ದಾರೆ. ಆಹಾರ ಮತ್ತು ನಾಗರಿಕ`ಸರಬರಾಜು ಸಚಿವ ಕೆ ಗೋಪಾಲಯ್ಯ ಅವರನ್ನು ನೇಮಕ ಮಾಡಲಾಗಿದೆ. ಈ ನೇಮಕದ ಹಿಂದೆ ಜಾತಿ ರಾಜಕೀಯ ಲೆಕ್ಕಾಚಾರವೂ ಇದೆ ಎಂಬ ಮಾತುಗಳು ವಿಧಾನಸೌಧದ ಪಡಸಾಲೆಯಲ್ಲಿ ಕೇಳಿ ಬರುತ್ತಿದೆ.

Advertisement

Udayavani is now on Telegram. Click here to join our channel and stay updated with the latest news.

Next