Advertisement

ರಾಜ್ಯಸಭಾ ಟಿಕೆಟ್ ವಿಚಾರದಲ್ಲಿ ಪಕ್ಷದ ವರಿಷ್ಠರ ನಿರ್ಧಾರಕ್ಕೆ ಬದ್ಧ: ರಮೇಶ್ ಜಾರಕಿಹೊಳಿ

05:21 PM Jun 05, 2020 | keerthan |

ಬೆಳಗಾವಿ: ರಾಜ್ಯಸಭಾ ಟಿಕೆಟ್ ವಿಚಾರದಲ್ಲಿ ನಾವು ನಮ್ಮ ಅಭಿಪ್ರಾಯವನ್ನು ಪಕ್ಷದ ವರಿಷ್ಠರಿಗೆ ತಿಳಿಸಿದ್ದೆವೆ. ಅವರು ತೆಗೆದುಕೊಳ್ಳುವ ನಿರ್ಧಾರಕ್ಕೆ ಬದ್ಧ ಎಂದು ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಹೇಳಿದರು.

Advertisement

ಬೆಳಗಾವಿಯಲ್ಲಿ ಶುಕ್ರವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು ಜಿಲ್ಲೆಯ ಪ್ರಭಾಕರ ಕೋರೆ ಹಾಗೂ ರಮೇಶ ಕತ್ತಿ ಟಿಕೆಟ್ ಆಕಾಂಕ್ಷಿಗಳಾಗಿದ್ದಾರೆ. ಎಲ್ಲರಿಗೂ ಈ ಆಸೆ ಇರುತ್ತದೆ. ಕೊನೆಗೆ ಹೈಕಮಾಂಡ್ ತೆಗೆದುಕೊಳ್ಳುವ ನಿರ್ಧಾರಕ್ಕೆ ಎಲ್ಲರೂ ಬದ್ದರಾಗಿರಬೇಕು ಎಂದರು.

ಬಿಜೆಪಿ ಕೆಲವು ಅತೃಪ್ತ ಶಾಸಕರು ತಮ್ಮ ಸಂಪರ್ಕದಲ್ಲಿದ್ದಾರೆ ಎಂಬ ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿಕೆಗೆ ಪ್ರತಿಕ್ರಿಯಿಸಿದ ರಮೇಶ ಜಾರಕಿಹೊಳಿ, ಸಿದ್ದರಾಮಯ್ಯ ಬಹಳ ದೊಡ್ಡ ನಾಯಕರು. ಅವರ ಬಗ್ಗೆ ನಾನು ಮಾತನಾಡುವದಿಲ್ಲ ಎಂದರು.

ಹಿರಿಯ ಶಾಸಕ ಉಮೇಶ ಕತ್ತಿ ಯಾವುಯ ಬಂಡಾಯ ಮಾಡಿಲ್ಲ. ಉತ್ತರ ಕರ್ನಾಟಕದ ಶಾಸಕರನ್ನು ಊಟಕ್ಕೆ ಕರೆದಿದ್ದರಲ್ಲಿ ಯಾವುದೇ ವಿಶೇಷ ಅರ್ಥವಿಲ್ಲ. ಬಿಜೆಪಿಯಲ್ಲಿ ಯಾವುದೇ ರೀತಿಯ ಭಿನ್ನಾಭಿಪ್ರಾಯ ಇಲ್ಲ ಎಂದು ಸ್ಪಷ್ಟಪಡಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next