Advertisement

ಜಾರಕಿಹೊಳಿ ಪತ್ರಿಕಾಗೋಷ್ಠಿ ಮುಂದೂಡಿಕೆ : ಠುಸ್‌ ಆಯ್ತೆ ರಮೇಶ್‌ ಜಾರಕಿಹೊಳಿ ಬಾಂಬ್‌!

11:25 PM Apr 17, 2022 | Team Udayavani |

ಗೋಕಾಕ: ಗುತ್ತಿಗೆದಾರ ಸಂತೋಷ್‌ ಪಾಟೀಲ್‌ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಸೋಮವಾರ ಮಾಹಿತಿ ಬಹಿರಂಗಪಡಿಸುವೆ ಎಂದು ಹೇಳಿದ್ದ ಶಾಸಕ ರಮೇಶ್‌ ಜಾರಕಿಹೊಳಿ ಹಿಂದೆ ಸರಿದಿದ್ದಾರೆ.

Advertisement

ಪತ್ರಿಕಾಗೋಷ್ಠಿಯನ್ನು ಅವರು ಮುಂದೂಡಿದ್ದಾರೆ. ಈ ಬಗ್ಗೆ ಪತ್ರಕರ್ತರಿಗೆ ಶಾಸಕ ರಮೇಶ ಜಾರಕಿಹೋಳಿ ಗೋಕಾಕ್‌ ಕಚೇರಿಯಿಂದ ಮಾಹಿತಿ ಲಭ್ಯವಾಗಿದ್ದು, ಸಂತೋಷ್‌ ಪಾಟೀಲ್‌ ಆತ್ಮಹತ್ಯೆ ಪ್ರಕರಣದ ಪೊಲೀಸ್‌ ತನಿಖೆ ನಡೆಯುತ್ತಿದೆ. ಪೋಲಿಸ್‌ ತಂಡ ರಚಿಸಿ ತನಿಖೆ ಕೈಗೊಂಡಿದ್ದಾರೆ. ಇಂತಹ ಸಂದರ್ಭ ಮಾತನಾಡಿದರೆ ತನಿಖೆ ದಾರಿ ತಪ್ಪಬಹುದು ಎನ್ನುವ ಉದ್ದೇಶದಿಂದ ಪತ್ರಿಕಾಗೋಷ್ಠಿ ಮುಂದೂಡಿರುವುದಾಗಿ ಶಾಸಕರ ಆಪ್ತ ಸಹಾಯಕ ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next