Advertisement

ಬಿಜೆಪಿ ಮುಖಂಡರೊಂದಿಗೆ ರಮೇಶ ಜಾರಕಿಹೊಳಿ ಮಾತುಕತೆ ಜೋರು-ಜೋರು

09:16 AM Sep 11, 2019 | keerthan |

ಬೆಳಗಾವಿ: ಅನರ್ಹ ಶಾಸಕ ರಮೇಶ ಜಾರಕಿಹೊಳಿ ಅವರು ಬಿ.ಎಸ್. ಯಡಿಯೂರಪ್ಪಗಾಗಿ ಕಾಯುತ್ತ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ನಿಂತು ಬಿಜೆಪಿ ಮುಖಂಡರೊಂದಿಗೆ ಸಮಾಲೋಚನೆ ನಡೆಸಿದರು. ಆದರೆ ಹುಕ್ಕೇರಿ ಶಾಸಕ ಉಮೇಶ ಕತ್ತಿ ಗೈರು ಹಾಜರಾಗಿದ್ದು ಚರ್ಚೆಗೆ ಗ್ರಾಸವಾಗಿದೆ.

Advertisement

ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಭೇಟಿ ಆಗಲು ವಿಮಾನ ನಿಲ್ದಾಣಕ್ಕೆ ಆಗಮಿಸಿರುವ ರಮೇಶ ಜಾರಕಿಹೊಳಿ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸುತ್ತ ನಿಂತಿದ್ದರು. ಬಳಿಕ ಬಿಜೆಪಿ ಮಹಾನಗರ ಘಟಕ ಅಧ್ಯಕ್ಷ ರಾಜೇಂದ್ರ ಹರಕುಣಿ, ಬಿಜೆಪಿ ಮುಖಂಡ ಎಂ.ಬಿ.‌ ಜಿರಲಿ ಅವರೊಂದಿಗೆ ಸುಮಾರು 10 ನಿಮಿಷಗಳ ಕಾಲ ಮಾತುಕತೆ ನಡೆಸಿ ಹರಟೆ ಹೊಡೆಯುತ್ತಿರುವುದು ಕಂಡು ಬಂತು.

ಬಾರದ ಕತ್ತಿ
ಉಮೇಶ ಕತ್ತಿ ಅವರಿಗೆ ಸಚಿವ ಸ್ಥಾನ ಕೈ ತಪ್ಪಿದ್ದರಿಂದ ಅಸಮಾಧಾನ ಗೊಂಡಿರುವ ಅವರು ಮುಖ್ಯಮಂತ್ರಿಗಳು ಜಿಲ್ಲೆಗೆ ಆಗಮಿಸಿದರೂ ಭೇಟಿ ಆಗಲು ಬಾರದಿರುವುದು ಚರ್ಚೆಗೆ ಕಾರಣವಾಗಿದೆ

ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿಯಾಗಲು ಯಡಿಯೂರಪ್ಪ ಅವರು ಜಿಲ್ಲೆಗೆ ಆಗಮಿಸಿದ್ದಾರೆ. ಕಾಂಗ್ರೆಸ್ ಅನರ್ಹ ಶಾಸಕ ರಮೇಶ ಜಾರಕಿಹೊಳಿ ಅವರು ಮಾತ್ರ ಆಗಮಿಸಿದ್ದು, ವ್ಯಾಪಕ ಚರ್ಚೆ ಆಗುತ್ತಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next