Advertisement

ಬಿಜೆಪಿ ಹೈಕಮಾಂಡ್ ಬಯಸಿದರೆ 5 ಕೈ ಶಾಸಕರ ರಾಜೀನಾಮೆ ಕೊಡಿಸುತ್ತೇನೆ: ರಮೇಶ್ ಜಾರಕಿಹೊಳಿ

05:24 PM May 29, 2020 | keerthan |

ಚಾಮರಾಜನಗರ: ಬಿಜೆಪಿ ಹೈಕಮಾಂಡ್ ಅನುಮತಿ ನೀಡಿದರೆ ಐದು ಮಂದಿ ಕಾಂಗ್ರೆಸ್ ಶಾಸಕರ ರಾಜೀನಾಮೆ ಕೊಡಿಸುತ್ತೇನೆ ಎಂದು ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಹೊಸ ಬಾಂಬ್ ಸಿಡಿಸಿದ್ದಾರೆ.

Advertisement

ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲದಲ್ಲಿ ಮಾತನಾಡಿದ ಅವರು, ಇಪ್ಪತ್ತೆರಡು ಮಂದಿ ಕಾಂಗ್ರೆಸ್ ಶಾಸಕರು ನನ್ನ ಸಂಪರ್ಕದಲ್ಲಿದ್ದಾರೆ. ಟ್ರಯಲ್ ಬೇಸ್ ಆಗಿ ಐದು ಮಂದಿ ಶಾಸಕರ ರಾಜೀನಾಮೆ ಕೊಡಿಸಲು ಸಿದ್ದ ಎಂದರು.

ಬಿಜೆಪಿ  ಹೈಕಮಾಂಡ್ ಅನುಮತಿ ನೀಡಿದರೆ ಒಂದು ವಾರದೊಳಗೆ ಅವರ ರಾಜೀನಾಮೆ ಕೊಡಿಸಿ  ಬಿಜೆಪಿಗೆ ಸೇರ್ಪಡೆಗೊಳಿಸುತ್ತೇನೆ ಎಂದ ಅವರು, ನಾನು ಮುಖ್ಯಮಂತ್ರಿ ಯಡಿಯೂರಪ್ಪ ಅವರ ಪರ ಇದ್ದೇನೆ. ಬಿಜೆಪಿ ಸರ್ಕಾರ ಸೇಫ್ ಆಗಿದೆ. ಯಾವುದೇ ಭಿನ್ನಮತವೂ ಇಲ್ಲ, ಉಮೇಶ್ ಕತ್ತಿ ನನ್ನ ಸ್ನೇಹಿತರು, ನಿನ್ನೆ ಫೋನ್ ಮಾಡಿ ಚರ್ಚಿಸಿದರು. ಚರ್ಚೆ ಮಾಡುವುದು ಭಿನ್ನಮತ ಅಲ್ಲ. ಅವರಿಗೆ ಯಾವ ರೀತಿ ಅಸಮಾಧಾನ ಆಗಿದೆ ಎಂಬುದರ ಬಗ್ಗೆ ನನಗೆ ಗೊತ್ತಿಲ್ಲ. ಅವರೊಡನೆ ಮತ್ತೆ ಚರ್ಚಿಸುತ್ತೇನೆ ಎಂದು ಹೇಳಿದರು.

ಈ ಮೂರು ವರ್ಷ ಅಷ್ಟೇ ಅಲ್ಲ, ಅದರ ಮುಂದಿನ ಐದು ವರ್ಷ ಕಾಲವು ಬಿಜೆಪಿ ಅಧಿಕಾರಕ್ಕೆ ತರಲು ಶ್ರಮಿಸುತ್ತೇವೆ. ನಾವು ಕಾಂಗ್ರೆಸ್ ನಲ್ಲಿದ್ದಾಗ ಮಾಡಿದ್ದು ಭಿನ್ನಮತ. ಇದೆಲ್ಲಾ ಭಿನ್ನಮತ ಅಲ್ಲ ಎಂದು ಸಮರ್ಥಿಸಿಕೊಂಡ ಸಚಿವರು ಕಾಂಗ್ರೆಸ್ ಮುಳುಗುವ ಪಕ್ಷ. ಹಾಗಾಗಿ ಆ ಪಕ್ಷಕ್ಕೆ ಯಾರೂ ಹೋಗುವುದಿಲ್ಲ. ಆಪರೇಷನ್ ಹಸ್ತ ಎಂಬುದು ನಡೆಯುವುದಿಲ್ಲ, ಬಿಜೆಪಿ ತೊರೆದು ಕಾಂಗ್ರೆಸ್ ಗೆ ಹೋಗುವಷ್ಟು ಮೂರ್ಖರಲ್ಲ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next