Advertisement

ಈಶ್ವರಪ್ಪ ಓಪನ್ ಹಾರ್ಟ್ ಮನುಷ್ಯ, ವಲಸಿಗರ ಬಗ್ಗೆ ಕೆಟ್ಟದಾಗಿ ಮಾತಾಡಿಲ್ಲ: ರಮೇಶ ಜಾರಕಿಹೊಳಿ

12:39 PM Jun 17, 2021 | Team Udayavani |

ಬೆಳಗಾವಿ/ಗೋಕಾಕ: ಸಚಿವ ಕೆ.ಎಸ್. ಈಶ್ವರಪ್ಪ ವಲಸಿಗರಿಗೆ ಹೆಚ್ಚು ಮಹತ್ವ ಕೊಟ್ಟಿದ್ದಾರೆ. ಈಶ್ವರಪ್ಪ ಒಳ್ಳೆಯ ಮನುಷ್ಯ. ಬಹಳ ಓಪನ್ ಹಾರ್ಟ್ ಮನುಷ್ಯ. ನಮ್ಮ ಬಗ್ಗೆ ಏನೂ ಕೆಟ್ಟದಾಗಿ ಮಾತನಾಡಿಲ್ಲ ಎಂದು ಗೋಕಾಕ ಶಾಸಕ ರಮೇಶ ಜಾರಕಿಹೊಳಿ ಹೇಳಿದರು.

Advertisement

ತಾಲೂಕಿನ ಗೋಕಾಕ ನಗರದಲ್ಲಿ ಗುರುವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ವಲಸಿಗರ ಬಗ್ಗೆ ಅತಿ ಹೆಚ್ಚು ಕಾಳಜಿ ಹೊಂದಿದ್ದಾರೆ. ನಿಮ್ಮ ಆಶೀರ್ವಾದದಿಂದಲೇ ನಾವು ಸಚಿವರಾಗಿ ಈ ಕುರ್ಚಿ ಮೇಲೆ ಕುಳಿತುಕೊಂಡಿದ್ದೇವೆ ಎಂಬುದಾಗಿ ಆಗಾಗ ನನಗೆ ಹೇಳುತ್ತಾರೆ. ಪ್ರತಿ ಸಲ ಈ ಮಾತು ನನಗೆ ಹೇಳಿದ್ದಾರೆ ಎಂದು ಈಶ್ವರಪ್ಪ ಪರ ರಮೇಶ ಪ್ರತಿಕ್ರಿಯೆ ನೀಡಿದರು.

ಇದನ್ನೂ ಓದಿ:ಆಡಳಿತದಲ್ಲಿ ಹಸ್ತಕ್ಷೇಪ, ಭ್ರಷ್ಟಚಾರ ಹೆಚ್ಚಾಗಿದೆ. ಸಿಎಂ ಬದಲಾವಣೆ ಮಾಡಬೇಕು: ವಿಶ್ವನಾಥ್

ಈಶ್ವರಪ್ಪ ವಲಸಿಗರ ಬಗ್ಗೆ ಆ ರೀತಿ ಹೇಳಲು ಸಾಧ್ಯವೇ ಇಲ್ಲ. ಕೆಲ ಮಾಧ್ಯಮದವರು ಅದನ್ನು ತಿರುಚಿದ್ದಾರೆ. ಮಾಧ್ಯಮದವರು ಕೇಳಿದ ಪ್ರಶ್ನೆಯನ್ನು ಟಿವಿಯಲ್ಲಿ ತೋರಿಸುವುದಿಲ್ಲ. ಹಿಂದುಳಿದ ವರ್ಗದ ನಾಯಕನನ್ನು ತುಳಿಯುವ ಕೆಲಸ ಕೆಲವರು ಮಡುತ್ತಿದ್ದಾರೆ ಎಂದು ಹೇಳಿದರು

Advertisement

Udayavani is now on Telegram. Click here to join our channel and stay updated with the latest news.

Next