Advertisement

ಚುನಾವಣೆ ಬಳಿಕ ರಮೇಶರಿಗೆ ಒಳ್ಳೆಯದಾಗಲಿದೆ: ಬಾಲಚಂದ್ರ ಜಾರಕಿಹೊಳಿ

01:15 AM May 22, 2022 | Team Udayavani |

ಬೆಳಗಾವಿ: ವಾಯವ್ಯ ಪದವೀಧರ ಕ್ಷೇತ್ರದಲ್ಲಿ ಹನುಮಂತ ನಿರಾಣಿ ಮತ್ತು ಶಿಕ್ಷಕರ ಕ್ಷೇತ್ರದಲ್ಲಿ ಅರುಣ ಶಹಾಪುರ ಗೆಲುವು ನಿಶ್ಚಿತ.

Advertisement

ಎಲ್ಲರೂ ಒಂದಾಗಿ ಅವರನ್ನು ಹೆಚ್ಚಿನ ಅಂತರದಿಂದ ಗೆಲ್ಲಿಸುತ್ತೇವೆ. ಯಾರ ಮೇಲೂ ಅಪವಾದ ಬರುವುದಿಲ್ಲ. ಚುನಾವಣೆ ಬಳಿಕ ರಮೇಶ್‌ ಜಾರಕಿಹೊಳಿಗೆ ಒಳ್ಳೆಯದಾಗಲಿದೆ ಎಂದು ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು.

ಸುದ್ದಿಗಾರರ ಜತೆ ಮಾತನಾಡಿದ ಅವರು, ನಮ್ಮಲ್ಲಿ ಭಿನ್ನಮತವಿಲ್ಲ. ಜಾರಕಿಹೊಳಿ ಸಹೋದರರನ್ನು ಬಿಜೆಪಿಯಲ್ಲಿ ಕಡೆಗಣಿಸಲಾಗುತ್ತಿದೆ ಎಂಬುದು ಸುಳ್ಳು.ನಮನ್ನು ಬಿಜೆಪಿಯಲ್ಲಿ ಗೌರವ ದಿಂದಲೇ ನಡೆಸಿಕೊಂಡಿದ್ದಾರೆ.

ಎಲ್ಲೋ ಒಂದೆರಡು ವ್ಯತ್ಯಾಸ ಆಗಿದೆ. ಅದನ್ನು ಸರಿಪಡಿಸಲಾಗುತ್ತಿದೆ. ಪಕ್ಷದ ಬಗ್ಗೆ ನಮಗೆ ಗೌರವವಿದೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next