Advertisement

Vijayapura; ಜೆಡಿಎಸ್ ಹೊಂದಾಣಿಕೆಯಿಂದ ಬಲ ಬಂದಿದೆ: ಸಂಸದ ಜಿಗಜಿಣಗಿ

02:07 PM Sep 30, 2023 | keerthan |

ವಿಜಯಪುರ: ಜೆಡಿಎಸ್ ಜೊತೆ ಹೊಂದಾಣಿಕೆಯಿಂದ ಚುನಾವಣೆಯಲ್ಲಿ ಗೆಲ್ಲಲು ಇನ್ನಷ್ಟು ಬಲ ಬಂದಿದೆ ಎಂದು ಬಿಜೆಪಿ ಹಿರಿಯ ಸಂಸದ ರಮೇಶ ಜಿಗಜಿಣಗಿ ಹೇಳಿದ್ದಾರೆ.

Advertisement

ಶನಿವಾರ ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜಕಾರಣ ನಿಂತ ನೀರಲ್ಲ, ಪರಿಸ್ಥಿತಿಗೆ ತಕ್ಕಂತೆ ಹೊಂದಾಣಿಕೆ ರಾಜಕೀಯದಲ್ಲಿ ಸಹಜ ಪ್ರಕ್ರಿಯೆ ಎಂದರು.

ಇದನ್ನೂ ಓದಿ:Indian Flag: ರಾಷ್ಟ್ರ‌ಧ್ವಜಕ್ಕೆ ಮದೀನಾ ಗುಂಬಜ್ ಚಿತ್ರ ಹಾಕಿ ಅಪಮಾನ: ವ್ಯಕ್ತಿ ಬಂಧನ

ಬಿಜೆಪಿ ಜೊತೆಗಿನ ಹೊಂದಾಣಿಕೆಯಿಂದಾಗಿ ಜೆಡಿಎಸ್ ಪಕ್ಷದ ಅಲ್ಪಸಂಖ್ಯಾತ ನಾಯಕರು ಪಕ್ಷ ತೊರೆಯುತ್ತಿರುವ ಸಮಸ್ಯೆಗೆ ಜೆಡಿಎಸ್ ನಾಯಕರೇ ಉತ್ತರ ಕಂಡುಕೊಳ್ಳುತ್ತಾರೆ. ಇದು ಬಿಜೆಪಿ ಪಕ್ಷಕ್ಕೆ ಸಂಬಂಧಿಸಿದ ವಿಷಯವಲ್ಲ ಎಂದರು.

ಕಳೆದ ಬಾರಿ ಲೋಕಸಭೆ ಚುನಾವಣೆ ಪೂರ್ವ ಕಾಂಗ್ರೆಸ್ ಜೊತೆ ಹೊಂದಾಣಿಕೆಯಿಂದ ವಿಜಯಪುರ ಕ್ಷೇತ್ರ ಜೆಡಿಎಸ್ ಪಕ್ಷಕ್ಕೆ ಸಿಕ್ಕಿತ್ತು, ಇದೀಗ ಬಿಜೆಪಿ ಜೊತೆಗಿನ ಹೊಂದಾಣಿಕೆಯಿಂದ ವಿಜಯಪುರ ಕ್ಷೇತ್ರ ಜೆಡಿಎಸ್ ಪಕ್ಷಕ್ಕೆ ಬಿಟ್ಟುಕೊಟ್ಟರೂ ಕೊಡಲಿ, ನನಗೇನು ಬೇಸರವಿಲ್ಲ ಎಂದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next