Advertisement

ಹೇಳ್ಳೋದು ಆಚಾರ, ತಿನ್ನೋದು ಬದನೆಕಾಯಿ’

02:00 AM Mar 22, 2019 | Team Udayavani |

ಶಿವಮೊಗ್ಗ: ಡಾ.ಉಮೇಶ ಜಾಧವ್‌ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದರೂ ಸ್ಪೀಕರ್‌ ರಮೇಶಕುಮಾರ್‌ ಇದುವರೆಗೂ ಅಂಗೀಕರಿಸಿಲ್ಲ. ಸದನದಲ್ಲಿ ಸಿಎಂ ಕುಮಾರಸ್ವಾಮಿಗೆ ಬುದ್ಧಿ ಹೇಳುವ ಅವರು, ಈಗ ಮೀನಮೇಷ ಎಣಿಸುತ್ತಿದ್ದಾರೆ. ಹೇಳುವುದು ಆಚಾರ ತಿನ್ನೋದು ಮಾತ್ರ ಬದನೆಕಾಯಿ ಎಂದು ಬಿಜೆಪಿ ಶಾಸಕ ಕೆ.ಎಸ್‌. ಈಶ್ವರಪ್ಪ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ  ಮಾತನಾಡಿ, ರಮೇಶ್‌ ಕುಮಾರ್‌ ಸಭಾಧ್ಯಕ್ಷ ಸ್ಥಾನಕ್ಕೆ ತಕ್ಕ ವ್ಯಕ್ತಿ. ಆದರೆ ಜಾಧವ್‌ ಅವರ ರಾಜೀನಾಮೆ ಅಂಗೀಕಾರ ಮಾಡಲು ಏಕೆ ಹಿಂದೇಟು ಹಾಕುತ್ತಿದ್ದಾರೆ ಎಂದು ತಿಳಿಯುತ್ತಿಲ್ಲ
ಎಂದರು. 

Advertisement
Advertisement

Udayavani is now on Telegram. Click here to join our channel and stay updated with the latest news.

Next