Advertisement

ರಮೇಶ, ಲಕ್ಷ್ಮೀ ಸಹೋದರ ಮಾತುಕತೆ: ಹೆಚ್ಚಿದ ಕುತೂಹಲ

10:47 PM Oct 05, 2019 | Lakshmi GovindaRaju |

ಬೆಳಗಾವಿ: ಬೆಳಗಾವಿ ಗ್ರಾಮೀಣ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ ಅವರ ಇಡಿ ವಿಚಾರಣೆ ಬೆನ್ನಲ್ಲೇ, ಅವರ ಸಹೋದರ ಚನ್ನರಾಜ ಹಟ್ಟಿಹೊಳಿ ಅನರ್ಹ ಶಾಸಕ ರಮೇಶ ಜಾರಕಿಹೊಳಿ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿರುವುದು ರಾಜಕೀಯ ವಲಯದಲ್ಲಿ ಕುತೂಹಲಕ್ಕೆ ಕಾರಣವಾಗಿದೆ.

Advertisement

ನಗರದ ಪ್ರವಾಸಿ ಮಂದಿರದಲ್ಲಿ ಶನಿವಾರ ಜಾರಕಿಹೊಳಿ ಅವರನ್ನು ಭೇಟಿ ಮಾಡಿ, ಸುಮಾರು 15 ನಿಮಿಷಗಳವರೆಗೆ ಚನ್ನರಾಜ ಚರ್ಚೆ ನಡೆಸಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, ಕೆಲ ವ್ಯವಹಾರದ ಸಂಬಂಧ ಚರ್ಚಿಸಲು ಬಂದಿದ್ದೆ. ಇದರಲ್ಲಿ ಬೇರೆ ವಿಶೇಷವಿಲ್ಲ ಎಂದು ಸುದ್ದಿಗಾರರಿಗೆ ತಿಳಿಸಿದರು.

ಈ ಮಧ್ಯೆ ಚನ್ನರಾಜ ಹಟ್ಟಿಹೊಳಿ ಹಾಗೂ ಅವರ ಜೊತೆಗೆ ಬಂದಿದ್ದ ಯುವರಾಜ ಕದಂ ಅವರೊಂದಿಗೆ ಮಾತುಕತೆ ನಡೆಸಿದ ನಂತರ ರಮೇಶ ಜಾರಕಿಹೊಳಿ ಹೊರಗಡೆ ಮಾಧ್ಯಮ ಪ್ರತಿನಿಧಿಗಳಿರುವುದನ್ನು ಕಂಡು ಮತ್ತೂಂದು ದಾರಿಯ ಮೂಲಕ ಅಲ್ಲಿಂದ ತೆರಳಿದರು. ಬೆಳಗಾವಿ ಪಿಎಲ್‌ಡಿ ಬ್ಯಾಂಕ್‌ ಚುನಾವಣೆ ನಂತರ ರಮೇಶ ಜಾರಕಿಹೊಳಿ ಹಾಗೂ ಲಕ್ಷ್ಮೀ ಹೆಬ್ಬಾಳ್ಕರ ನಡುವಿನ ರಾಜಕೀಯ ಸಂಬಂಧ ಹಳಸಿರುವಾಗ ಈ ಭೇಟಿ ಸಾಕಷ್ಟು ಕುತೂಹಲಕ್ಕೆ ಎಡೆಮಾಡಿಕೊಟ್ಟಿದೆ.

Advertisement

Udayavani is now on Telegram. Click here to join our channel and stay updated with the latest news.

Next