Advertisement

ಕಾಂಗ್ರೆಸ್‌ ನೋಟಿಸ್‌ಗೆ ರಮೇಶ್‌, ನಾಗೇಂದ್ರ, ಕುಮಠಳ್ಳಿ ಉತ್ತರ

01:20 AM Jan 25, 2019 | |

ಬೆಂಗಳೂರು: ಕಾಂಗ್ರೆಸ್‌ ಶಾಸಕಾಂಗ ಸಭೆಗೆ ಗೈರು ಹಾಜರಾಗಿದ್ದ ಹಿನ್ನೆಲೆಯಲ್ಲಿ ಜಾರಿ ಮಾಡಲಾಗಿದ್ದ ನೋಟಿಸ್‌ಗೆ ಮಾಜಿ ಸಚಿವ ರಮೇಶ್‌ ಜಾರಕಿಹೊಳಿ, ನಾಗೇಂದ್ರ ಹಾಗೂ ಮಹೇಶ್‌ ಕುಮಠಳ್ಳಿ ಶಾಸಕಾಂಗ ಪಕ್ಷದ ಕಾರ್ಯದರ್ಶಿಗೆ ಉತ್ತರ ರವಾನೆ ಮಾಡಿದ್ದಾರೆ.

Advertisement

ಗುರುವಾರ ಸಮನ್ವಯ ಸಮಿತಿ ಸಭೆ ಆರಂಭವಾಗುವ ಕೆಲವೇ ಹೊತ್ತಿನ ಮುಂಚೆ ನೋಟಿಸ್‌ಗೆ ಉತ್ತರ ರವಾನಿಸಿದ್ದಾರೆ. ಸಮನ್ವಯ ಸಮಿತಿ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ, ಶಾಸಕಾಂಗ ಪಕ್ಷದ ಸಭೆಗೆ ಗೈರು ಹಾಜರಾಗಿದ್ದ ನಾಲ್ವರು ಶಾಸಕರಿಗೆ ನೊಟೀಸ್‌ ನೀಡಲಾಗಿತ್ತು. ರಮೇಶ ಜಾರಕಿಹೊಳಿ, ನಾಗೇಂದ್ರ ಹಾಗೂ ಮಹೇಶ್‌ ಕುಮಠಳ್ಳಿ ನೊಟೀಸ್‌ಗೆ ಉತ್ತರ ನೀಡಿದ್ದಾರೆ. ನಾಗೇಂದ್ರ ಯಾವುದೇ ಕಾರಣಕ್ಕೂ ಕಾಂಗ್ರೆಸ್‌ ಬಿಡುವುದಿಲ್ಲ. ಬಿಜೆಪಿ ಸಂಸ್ಕೃತಿಗೂ ನನಗೂ ಆಗುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ರಮೇಶ್‌ ಜಾರಕಿಹೊಳಿ ಹಾಗೂ ಮಹೇಶ್‌ ಕುಮಠಳ್ಳಿ ಅವರ ಪತ್ರ ಬಂದಿದ್ದು, ಅವರೂ ಕಾಂಗ್ರೆಸ್‌ ತೊರೆಯುವುದಿಲ್ಲ ಎಂದು ತಿಳಿಸಿದ್ದಾರೆ. ಚಿಂಚೋಳಿ ಶಾಸಕ ಉಮೇಶ್‌ ಜಾಧವ್‌ ಅವರಿಂದ ಯಾವುದೇ ರೀತಿಯ ಉತ್ತರ ಬಂದಿಲ್ಲ ಎಂದು ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next