Advertisement

ಬಿಜೆಪಿ ಬ್ಯಾನರ್‌ನಲ್ಲಿ ರಮೇಶ ಫೋಟೋ!

01:21 AM May 25, 2019 | Sriram |

ಚಿಕ್ಕೋಡಿ: ಲೋಕಸಭಾ ಚುನಾವಣೆಯಲ್ಲಿ ಜಯಭೇರಿ ಬಾರಿಸಿದ ಬಿಜೆಪಿಗೆ ಅಭಿನಂದನಾ ಬ್ಯಾನರ್‌ವೊಂದರಲ್ಲಿ ಕಾಂಗ್ರೆಸ್‌ ಬಂಡಾಯ ಶಾಸಕ ರಮೇಶ ಜಾರಕಿಹೊಳಿ ಫೋಟೋ ಕಾಣಿಸಿಕೊಂಡಿರುವುದು ತೀವ್ರ ಕುತೂಹಲ ಮೂಡಿಸಿದೆ.

Advertisement

ನಿಪ್ಪಾಣಿಯ ಶ್ರೀರಾಮ ಸೇನೆ ಹಿಂದುಸ್ತಾನ್‌ ಸಂಘಟನೆ ಹಾಕಿರುವ ಅಭಿನಂದನಾ ಬ್ಯಾನರ್‌ನಲ್ಲಿ ಬಿಜೆಪಿ ಮುಖಂಡರ ಜತೆ ರಮೇಶ ಜಾರಕಿಹೊಳಿ ಫೋಟೋ ಹಾಕಲಾಗಿದೆ. ಚುನಾವಣೆಯಲ್ಲಿ ಬಿಜೆಪಿ ಪರ ಪರೋಕ್ಷವಾಗಿ ಕೆಲಸ ಮಾಡಿದ್ದ ಗೋಕಾಕ ಶಾಸಕ ರಮೇಶ ಜಾರಕಿಹೊಳಿ ಚಿಕ್ಕೋಡಿ ಬಿಜೆಪಿ ಅಭ್ಯರ್ಥಿ ಅಣ್ಣಾಸಾಹೇಬ ಜೊಲ್ಲೆ ಗೆಲುವಿಗೆ ಪರೋಕ್ಷವಾಗಿ ಕಾರಣರಾಗಿದ್ದಾರೆ ಎನ್ನುವ ಸುದ್ದಿ ತೀವ್ರ ಚರ್ಚೆ ಹುಟ್ಟುಹಾಕಿದೆ.

ಆದರೆ, ಸಂಘಟನೆಯ ಚಿಕ್ಕೋಡಿ ಘಟಕದ ಅಧ್ಯಕ್ಷ ನಿಲೇಶ ಹತ್ತಿ, ‘ಜೊಲ್ಲೆ ಹಾಗೂ ರಮೇಶ ಜಾರಕಿಹೊಳಿ ಅವರು ಸಾಮಾಜಿಕ ಕೆಲಸ ಕಾರ್ಯಗಳಿಗೆ ನಮಗೆ ಸಹಾಯ ಮಾಡುತ್ತಾರೆ. ಹೀಗಾಗಿ ನಮ್ಮ ಸಂಘಟನೆ ವತಿಯಿಂದ ನಮಗೆ ಬೇಕಿರುವ ರಾಜಕಾರಣಿಗಳ ಫೋಟೋ ಬಳಕೆ ಮಾಡಿಕೊಳ್ಳಲಾಗಿದೆ.

ಇದಕ್ಕೆ ರಾಜಕೀಯ ಬಣ್ಣ ಬಳಿಯುವುದು ಬೇಡ. ಸಂಘಟನೆಗೂ, ರಾಜಕೀಯಕ್ಕೂ ಯಾವುದೇ ರೀತಿ ಸಂಬಂಧವಿಲ್ಲ’ ಎಂದು ಸಮಜಾಯಿಷಿ ನೀಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next