Advertisement

Rameshwaram Cafe Case: ರಾಮೇಶ್ವರಂ ಕೆಫೆ ಸ್ಫೋಟ ಶಂಕಿತರು ಮತ್ತೆ 7 ದಿನ ಎನ್‌ಐಎ ವಶಕ್ಕೆ

12:10 PM Apr 23, 2024 | Team Udayavani |

ಬೆಂಗಳೂರು:  ರಾಮೇಶ್ವರಂ ಕೆಫೆ ಬಾಂಬ್‌ ಸ್ಫೋಟ ಪ್ರಕರಣದ ಆರೋಪಿ ಗಳಾದ ಶಿವಮೊಗ್ಗ ತೀರ್ಥಹಳ್ಳಿಯ ಮುಸಾ ವೀರ್‌ ಹುಸೇನ್‌ ಶಾಜೀಬ್‌, ಮಥೀನ್‌ ಅಹಮದ್‌ ತಾಹಾನನ್ನು ಹೆಚ್ಚಿನ ವಿಚಾರಣೆಗಾಗಿ ಎನ್‌ಐಎ ಮತ್ತೆ 7 ದಿನಗಳ ಕಾಲ ವಶಕ್ಕೆ ಪಡೆಯಲಾಗಿದೆ.

Advertisement

ಏ.12ರಂದು ಪಶ್ಚಿಮ ಬಂಗಾಳದಲ್ಲಿ ಇಬ್ಬರು ಶಂಕಿತರನ್ನು ಬಂಧಿಸಿ, ಕೋರ್ಟ್‌ಗೆ ಹಾಜರುಪಡಿಸಿ 10 ದಿನ‌ ಕಾಲ ವಶಕ್ಕೆ ಪಡೆಯಲಾಗಿತ್ತು. ಸೋಮವಾರ ಕಸ್ಟಡಿ ಅಂತ್ಯಗೊಂಡ ಹಿನ್ನೆಲೆಯಲ್ಲಿ ಎನ್‌ಐಎ ವಿಶೇಷ ನ್ಯಾಯಾಲಯಕ್ಕೆ ಇಬ್ಬರನ್ನು ಹಾಜರುಪಡಿಸಲಾಗಿತ್ತು.

ಆರೋಪಿಗಳಿಂದ ಇನ್ನಷ್ಟು ಮಾಹಿತಿ ಸಂಗ್ರಹ, ಸ್ಥಳ ಪರಿಶೀಲನೆ ಕಾರಣಕ್ಕಾಗಿ ಹೆಚ್ಚುವರಿ 7 ದಿನ ಕಾಲ ಮತ್ತೂಮ್ಮೆ ವಶಕ್ಕೆ ಪಡೆಯಲಾಗಿದೆ ಎಂದು ಎನ್‌ಐಎ ಮೂಲಗಳು ತಿಳಿಸಿವೆ. ಸ್ಫೋಟ ಹಾಗೂ ಸಂಚಿನ ಬಗ್ಗೆ ಶಂಕಿತರು ಹಲವು ಮಾಹಿತಿ ನೀಡಿದ್ದಾರೆ. ಅವುಗಳ ಪರಿಶೀಲನೆ ನಡೆಯುತ್ತಿದೆ.

Advertisement

Udayavani is now on Telegram. Click here to join our channel and stay updated with the latest news.

Next