Advertisement

Rameshwaram Cafe Case; ಬಾಂಬರ್ ಮತ್ತು ಮಾಸ್ಟರ್ ಮೈಂಡ್ ಕೋಲ್ಕತ್ತಾದಲ್ಲಿ ಎನ್ಐಎ ಬಲೆಗೆ

11:59 AM Apr 12, 2024 | Team Udayavani |

ಬೆಂಗಳೂರು: ಮಹತ್ವದ ಬೆಳವಣಿಗೆಯೊಂದರಲ್ಲಿ ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಬಾಂಬರ್ ಮತ್ತು ಮಾಸ್ಟರ್ ಮೈಂಡ್ ನನ್ನು ಎನ್ಐಎ ಅಧಿಕಾರಿಗಳು ಬಂಧಿಸಿದ್ದಾರೆ. ಬೆಂಗಳೂರಿನಲ್ಲಿ ಆತಂಕ ಸೃಷ್ಟಿಸಿದ್ದ ಇಬ್ಬರನ್ನು ಎನ್ಐಎ ಅಧಿಕಾರಿಗಳು ಪಶ್ಚಿಮ ಬಂಗಾಳದ ಕೋಲ್ಕತ್ತಾದಲ್ಲಿ ಬಂಧಿಸಿದ್ದಾರೆ.

Advertisement

ಅಬ್ದುಲ್ ಮಥೀನ್ ತಾಹಾ ಮತ್ತು ಮುಸ್ಸಾವಿರ್ ಹುಸೇನ್ ಶಾಝೇಬ್ ಅವರನ್ನು ಕೋಲ್ಕತ್ತಾದ ಬಳಿ ಅವರ ಅಡಗುದಾಣದಲ್ಲಿ ಪತ್ತೆಹಚ್ಚಲಾಗಿದೆ.

ಮುಸ್ಸಾವಿರ್ ಹುಸೇನ್ ಶಾಜಿಬ್ ಕೆಫೆಯಲ್ಲಿ ಐಇಡಿ ಇರಿಸಿದ ಆರೋಪಿಯಾಗಿದ್ದು, ಸ್ಫೋಟದ ಕಾರ್ಯಗತಗೊಳಿಸುವಿಕೆ ಮತ್ತು ನಂತರ ಕಾನೂನಿನ ಹಿಡಿತದಿಂದ ತಪ್ಪಿಸಿಕೊಳ್ಳುವ ಮಾಸ್ಟರ್ ಮೈಂಡ್ ಆಗಿರುವ ಅಬ್ದುಲ್ ಮಥೀನ್ ತಾಹಾನನ್ನು ಬಂಧಿಸಲಾಗಿದೆ.

ಎಪ್ರಿಲ್ 12ರಂದು ಮುಂಜಾನೆ, ಎನ್‌ಐಎ ಕೋಲ್ಕತ್ತಾದ ಬಳಿ ತಲೆಮರೆಸಿಕೊಂಡಿದ್ದ ಆರೋಪಿಗಳನ್ನು ಬಂಧಿಸಿದೆ ಎಂದು ಎನ್ಐಎ ಪ್ರಕಟಣೆ ತಿಳಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next