Advertisement

Rameshwaram Cafe Case; ಶಂಕಿತ ಉಗ್ರನ ಮಾಹಿತಿ ಪಡೆಯಲು ಎನ್ಐಎ ತಂಡ ಬಳ್ಳಾರಿಗೆ

07:55 AM Mar 07, 2024 | Team Udayavani |

ಬಳ್ಳಾರಿ:  ಬೆಂಗಳೂರಿನ ರಾಮೇಶ್ವರಂ ಕೆಫೆ ಬಾಂಬ್ ಬ್ಲಾಸ್ಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಶಂಕಿತ ಉಗ್ರನ ಸುಳಿವಿಗಾಗಿ ಎನ್ಐಎ ತಂಡ ಬಳ್ಳಾರಿಗೆ ಆಗಮಿಸಿದೆ.

Advertisement

ಎನ್ಐಎ ತಂಡ ತಡರಾತ್ರಿಯಿಂದ ಬೆಳಗಿನ ಜಾವದವರೆಗೂ ಬಳ್ಳಾರಿ ಬಸ್ ನಿಲ್ದಾಣದಲ್ಲಿದ್ದು, ಮಾಹಿತಿ ಪಡೆದರು. ಎನ್ಐಎ ತಂಡಕ್ಕೆ ಬಳ್ಳಾರಿ ಮತ್ತು ತುಮಕೂರು ಪೊಲೀಸರು ಸಾಥ್ ನೀಡಿದರು.

ಘಟನೆ ನಡೆದ ಬಳಿಕ ಆರೋಪಿ ತುಮಕೂರು ಮೂಲಕ ಬಳ್ಳಾರಿ ಬಸ್ ನಿಲ್ದಾಣಕ್ಕೆ ಬಂದಿದಿದ್ದನಂತೆ. ಬಳ್ಳಾರಿ ಬಸ್ ನಿಲ್ದಾಣದಿಂದ ಮಂತ್ರಾಲಯ ಗೋಕರ್ಣ ಬಸ್ ಮೂಲಕ ಭಟ್ಕಳಗೆ ತೆರಳಿದ್ದಾನೆ. ಹೀಗಾಗಿ ಎನ್ಐಎ ತಂಡ ಬಳ್ಳಾರಿ ನಿಲ್ದಾಣಕ್ಕೆ ಬಂದು ಪರಿಶೀಲನೆ ನಡೆಸಿದ್ದಾರೆ.

ಬೆಂಗಳೂರಿಂದ ಎರಡು ಕಾರುಗಳಲ್ಲಿ ಹತ್ತಕ್ಕೂ ಹೆಚ್ಚು ಅಧಿಕಾರಿಗಳು ಬಂದಿದ್ದು, ಶಂಕಿತ ಉಗ್ರ ಬಳ್ಳಾರಿಯಿಂದಲೇ ಬೇರೆಡೆ ತೆರಳಿದ ಹಿನ್ನಲೆ ಬಳ್ಳಾರಿ ನಿಲ್ದಾಣದಲ್ಲಿ ಮಾಹಿತಿ ಪಡೆಯಲಾಗಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next