Advertisement

Shobha Karandlaje ವಿರುದ್ಧದ ಕ್ರಿಮಿನಲ್ ಕೇಸ್ ರದ್ದುಗೊಳಿಸಿದ ಮದ್ರಾಸ್ ಹೈಕೋರ್ಟ್

06:12 PM Sep 05, 2024 | Team Udayavani |

ಚೆನ್ನೈ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ(Shobha Karandlaje) ವಿರುದ್ಧ ದಾಖಲಾಗಿದ್ದ ಕ್ರಿಮಿನಲ್ ಮೊಕದ್ದಮೆಯನ್ನು ಮದ್ರಾಸ್ ಹೈಕೋರ್ಟ್ ಗುರುವಾರ(ಸೆ 5) ರದ್ದುಗೊಳಿಸಿದೆ.

Advertisement

ಮಾರ್ಚ್ 1 ರಂದು ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಕಡಿಮೆ ತೀವ್ರತೆಯ ಸ್ಫೋಟದ ನಂತರ ಸುಮಾರು 10 ಮಂದಿ ಗಾಯಗೊಂಡಿದ್ದರು. , ಶೋಭಾ ಕರಂದ್ಲಾಜೆ ಅವರು ಘಟನೆಗೆ ತಮಿಳುನಾಡಿನವರೇ ಕಾರಣ ಎಂದು ಆರೋಪಿಸಿ ಹೇಳಿಕೆ ನೀಡಿದ್ದರು. ಮಧುರೈ ಪೊಲೀಸರು ಪ್ರಕರಣ ದಾಖಲಿಸಿದ್ದರು.

ಶೋಭಾ ಕರಂದ್ಲಾಜೆಯವರು ಕ್ಷಮೆಯಾಚನೆಯ ಅಫಿಡವಿಟ್ ಸ್ವೀಕರಿಸಲು ನಿರ್ಧಾರ ತೆಗೆದುಕೊಂಡಿರುವುದಾಗಿ ತಮಿಳುನಾಡು ಸರಕಾರವು ಪೀಠಕ್ಕೆ ತಿಳಿಸಿದ ನಂತರ ನ್ಯಾಯಮೂರ್ತಿ ಜಿ. ಜಯಚಂದ್ರನ್ ಅವರು ಕ್ರಿಮಿನಲ್ ಮೊಕದ್ದಮೆ ರದ್ದು ಮಾಡಿ ಆದೇಶವನ್ನು ನೀಡಿದ್ದಾರೆ. ತಮಿಳುನಾಡು ಸರಕಾರವೂ ಇನ್ನು ಮುಂದೆ ಈ ವಿಚಾರವನ್ನು ಮುಂದುವರಿಸಲು ಬಯಸುವುದಿಲ್ಲ ಎಂದು ಹೇಳಿದೆ.

ಶೋಭಾ ಕರಂದ್ಲಾಜೆ ಅವರು ಈಗಾಗಲೇ ತಮ್ಮ ಹೇಳಿಕೆಗಳನ್ನು ಹಿಂತೆಗೆದುಕೊಂಡಿದ್ದು, ಸಾಮಾಜಿಕ ಮಾಧ್ಯಮ ವೇದಿಕೆಗಳ ಮೂಲಕ ಬಹಿರಂಗ ಕ್ಷಮೆಯಾಚನೆಯನ್ನು ಕೋರಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next