Advertisement

Ayodhya: ವಿದೇಶಿ ದೇಣಿಗೆ ಪಡೆಯಲು ರಾಮಜನ್ಮಭೂಮಿ ಟ್ರಸ್ಟ್‌ಗೆ ಅನುಮೋದನೆ

10:35 PM Oct 18, 2023 | Team Udayavani |

ನವದೆಹಲಿ: ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣದಲ್ಲಿ ತೊಡಗಿರುವ ಶ್ರೀ ರಾಮಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ಗೆ ಕೇಂದ್ರ ಗೃಹ ಸಚಿವಾಲಯವು ವಿದೇಶಿ ಕೊಡುಗೆ ನಿಯಂತ್ರಣ ಕಾಯ್ದೆ(ಎಫ್ಸಿಆರ್‌ಎ)ಯಡಿ ವಿದೇಶಿ ಮೂಲಗಳಿಂದ ದೇಣಿಗೆ ಸಂಗ್ರಹಕ್ಕೆ ಅನುಮೋದನೆ ನೀಡಿದೆ ಎಂದು ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್‌ ರಾಯ್‌ ತಿಳಿಸಿದ್ದಾರೆ.

Advertisement

“ವಿದೇಶಿ ಮೂಲಗಳಿಂದ ಸ್ವಯಂಪ್ರೇರಿತವಾಗಿ ನೀಡುವ ದೇಣಿಗೆ ಸ್ವೀಕರಿಸಲು ಟ್ರಸ್ಟ್‌ಗೆ ಕೇಂದ್ರ ಸರ್ಕಾರ ಅನುಮತಿ ನೀಡಿದೆ. ಈ ರೀತಿಯ ದೇಣಿಗೆಯನ್ನು ಭಕ್ತರು ಟ್ರಸ್ಟ್‌ನ ನವದೆಹಲಿಯ 11 ಸಂಸದ್‌ ಮಾರ್ಗ್‌ನಲ್ಲಿರುವ ಸ್ಟೇಟ್‌ ಬ್ಯಾಂಕ್‌ ಆಫ್ ಇಂಡಿಯಾದ ಪ್ರಧಾನ ಕಚೇರಿಯ ಬ್ಯಾಂಕ್‌ ಖ್ಯಾತೆಗೆ ಕಳುಹಿಸಬಹುದು” ಎಂದು ಟ್ವೀಟ್‌(ಎಕ್ಸ್‌) ಮೂಲಕ ಮಾಹಿತಿ ನೀಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next