Advertisement

Ramnagar; ಕ್ಷುಲ್ಲಕ ಕಾರಣಕ್ಕೆ ಗಲಾಟೆ: ಯುವಕನ ಕೊಲೆಯಲ್ಲಿ ಅಂತ್ಯ

06:18 PM Aug 21, 2023 | Team Udayavani |

ರಾಮನಗರ : ಕ್ಷುಲ್ಲಕ ಕಾರಣಕ್ಕೆ ನಡೆದ ಗಲಾಟೆ ಕೊಲೆಯಲ್ಲಿ ಅಂತ್ಯವಾದ ಘಟನೆ ಕನಕಪುರ ತಾಲೂಕಿನ‌ ದಿಂಬದಹಳ್ಳಿ ಗ್ರಾಮದಲ್ಲಿ ನಡೆದಿದೆ.

Advertisement

ಅಜಯ್ (28) ಮೃತ ವ್ಯಕ್ತಿ. ಪ್ರತಿನಿತ್ಯ ಕುಡಿದು ಅಕ್ಕ ಪಕ್ಕದ ಮನೆಯವರ ಜೊತೆ ಗಲಾಟೆ ಮಾಡುತ್ತಿದ್ದ ಅಜಯ್ ಭಾನುವಾರ ರಾತ್ರಿ ಕುಡಿದು ದಾಯಾದಿಗಳ ಜತೆ ಗಲಾಟೆ ಮಾಡಿದ್ದ.ಗಲಾಟೆ ವೇಳೆ ದೊಣ್ಣೆಯಿಂದ ಹೊಡೆದಿದ್ದು, ಸ್ಥಳದಲ್ಲೇ ಸಾವನಪ್ಪಿದ್ದಾನೆ ಎಂದು ತಿಳಿದು ಬಂದಿದೆ.

ರಾಜ, ಕಲ್ಪನ, ಮಾರೇಗೌಡ ಎಂಬುವವರಿಂದ ಹಲ್ಲೆ ನಡೆದಿದ್ದು, ಮೂವರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕೋಡಿಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next