Advertisement

ರಮ್ಯಾ ಬಿಜೆಪಿಗೆ ಬಂದ್ರೆ ವಿಷ ಕುಡಿದು ಸಾಯ್ತೀನಿ; ಬಿಎಸ್ ವೈಗೆ ಪತ್ರ

03:59 PM Mar 14, 2017 | Sharanya Alva |

ಬೆಂಗಳೂರು:ಮಾಜಿ ಸಂಸದೆ, ಸ್ಯಾಂಡಲ್ ವುಡ್ ನಟಿ ರಮ್ಯಾ ಅವರನ್ನು ಬಿಜೆಪಿ ಪಕ್ಷಕ್ಕೆ ಸೇರ್ಪಡೆ ಮಾಡಿಕೊಳ್ಳಬೇಡಿ. ಒಂದು ವೇಳೆ ರಮ್ಯಾಳನ್ನು ಬಿಜೆಪಿಗೆ ಸೇರಿಸಿಕೊಂಡರೆ ವಿಷ ಕುಡಿದು ಸಾಯ್ತೀನಿ…ಇದು ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪನವರಿಗೆ ಮಂಡ್ಯದ ಬಿಜೆಪಿ ಕಾರ್ಯಕರ್ತರೊಬ್ಬರು ಬರೆದ ಪತ್ರದ ಸಾರಾಂಶ!

Advertisement

ಕಾಂಗ್ರೆಸ್ ಹಿರಿಯ ಮುಖಂಡ, ಮಾಜಿ ಸಿಎಂ ಎಸ್ ಎಂ ಕೃಷ್ಣ ಅವರು ಬಿಜೆಪಿಗೆ ಸೇರ್ಪಡೆಯಾಗುತ್ತಿದ್ದು, ಇದರ ಬೆನ್ನಲ್ಲೇ ಎಸ್ಎಂಕೆ ಹಿಂಬಾಲಕರು, ಅಭಿಮಾನಿಗಳು ಕೂಡಾ ಬಿಜೆಪಿಗೆ ಸೇರಲಿದ್ದಾರೆ ಎಂಬ ಸುದ್ದಿ ಹಬ್ಬಿದೆ. ಏತನ್ಮಧ್ಯೆ ಎಸ್ಎಂ ಕೃಷ್ಣ ಅವರು ಕಾಂಗ್ರೆಸ್ ತೊರೆದಿರುವುದರಿಂದ ಮಂಡ್ಯ ಮಾಜಿ ಸಂಸದೆ ರಮ್ಯಾ ಕೂಡಾ ಬಿಜೆಪಿ ಸೇರ್ಪಡೆಯಾಗಲಿದ್ದಾರೆ ಎಂಬ ಊಹಾಪೋಹ ಹಬ್ಬಿರುವುದು ಬಿಜೆಪಿ ಕಾರ್ಯಕರ್ತರಲ್ಲಿ ಅಸಮಾಧಾನ ಮೂಡಿಸಿದೆ ಎಂದು ಮಾಧ್ಯಮದ ವರದಿ ತಿಳಿಸಿದೆ. ಪಾಕಿಸ್ತಾನ ಹೊಗಳಿ ದೇಶಪ್ರೇಮ ಮರೆತಿರುವ ರಮ್ಯಾ ಬಿಜೆಪಿಗೆ ಬೇಡ ಎಂದು ಬಿಜೆಪಿ ಕಾರ್ಯಕರ್ತ ಸಿಟಿ ಮಂಜುನಾಥ ಅಸಮಾಧಾನ ಹೊರಹಾಕಿದ್ದಾರೆ.

ರಮ್ಯಾ ಕಳೆದ ವರ್ಷ ಮಂಡ್ಯದಲ್ಲಿ ಪಾಕಿಸ್ತಾನ ಪರ ಹೇಳಿಕೆ ಹಾಗೂ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಕಾಂಗ್ರೆಸ್ ಪಕ್ಷ ಹೋರಾಟ ಮಾಡಿದೆ ವಿನಃ, ಆರ್ ಎಸ್ಎಸ್ ಏನೂ ಮಾಡಿಲ್ಲ ಅಂತಾ ವಿವಾದಾತ್ಮಕ ಹೇಳಿಕೆ ನೀಡಿ ಬಿಜೆಪಿ ಕೆಂಗಣ್ಣಿಗೆ ಗುರಿಯಾಗಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next