Advertisement

ರಣಜಿ: ಕೆ. ಗೌತಮ್‌ ಗಾಯಾಳು

11:27 PM Dec 14, 2019 | Team Udayavani |

ಬೆಂಗಳೂರು: ತಮಿಳುನಾಡು ವಿರುದ್ಧದ ಮೊದಲ ರಣಜಿ ಪಂದ್ಯದಲ್ಲಿ 14 ವಿಕೆಟ್‌ ಉಡಾಯಿಸಿದ ಕರ್ನಾಟಕದ ಗೆಲುವಿನ ರೂವಾರಿಯಾಗಿದ್ದ ಸ್ಪಿನ್ನರ್‌ ಕೃಷ್ಣಪ್ಪ ಗೌತಮ್‌ ಗಾಯಾಳಾಗಿದ್ದಾರೆ. ಡಿ. 17ರಿಂದ ಹುಬ್ಬಳ್ಳಿಯಲ್ಲಿ ಉತ್ತರ ಪ್ರದೇಶ ವಿರುದ್ಧ ನಡೆ ಯುವ ರಣಜಿ ಪಂದ್ಯದಿಂದ ಹೊರಗುಳಿದಿದ್ದಾರೆ.

Advertisement

ಗೌತಮ್‌ ಅವರ ಪಾದದ ಮೂಳೆಯಲ್ಲಿ ಸಣ್ಣ ಬಿರುಕು ಕಾಣಿಸಿರುವುದರಿಂದ ಆಡುವುದಿಲ್ಲ, ಅವರ ಚೇತರಿಕೆ ಕುರಿತು ಇನ್ನೆರಡು ದಿನದಲ್ಲಿ ಮಾಹಿತಿ ನೀಡುತ್ತೇವೆ ಎಂದು ಕೆಎಸ್‌ಸಿಎ ತಿಳಿಸಿದೆ.

ಉಳಿದಂತೆ ತಂಡದಲ್ಲಿ ಮಹತ್ವದ ಬದಲಾವಣೆ ಸಂಭವಿಸಿಲ್ಲ. ಮನೀಷ್‌ ಪಾಂಡೆ ಅನುಪಸ್ಥಿತಿಯಲ್ಲಿ ಕರುಣ್‌ ನಾಯರ್‌ ನಾಯಕರಾಗಿ ಮುಂದುವರಿದಿದ್ದಾರೆ.

ಕರ್ನಾಟಕ ತಂಡ: ಕರುಣ್‌ ನಾಯರ್‌ (ನಾಯಕ), ರೋಹನ್‌ ಕದಮ್‌, ದೇವದತ್ತ ಪಡಿಕ್ಕಲ್‌, ಡಿ. ನಿಶ್ಚಲ್‌, ಆರ್‌. ಸಮರ್ಥ್, ಅಭಿಷೇಕ್‌ ರೆಡ್ಡಿ, ಪ್ರವೀಣ್‌ ದುಬೆ, ಶ್ರೇಯಸ್‌ ಗೋಪಾಲ್‌, ಜೆ. ಸುಚಿತ್‌, ಬಿ.ಆರ್‌. ಶರತ್‌, ಶರತ್‌ ಶ್ರೀನಿವಾಸ್‌, ರೋನಿತ್‌ ಮೋರೆ, ಡೇವಿಡ್‌ ಮಥಾಯಿಸ್‌, ವಿ. ಕೌಶಿಕ್‌, ಅಭಿಮನ್ಯು ಮಿಥುನ್‌.

Advertisement

Udayavani is now on Telegram. Click here to join our channel and stay updated with the latest news.

Next