Advertisement

‘ರಾಜರಾಣಿ’ಗೆ ಯೋಗಿ ಸಾಥ್

05:06 PM Sep 15, 2023 | Team Udayavani |

ಹೊಸಬರ “ರಾಜರಾಣಿ’ ಚಿತ್ರದ ಚಿತ್ರೀಕರಣ ಭರದಿಂದ ಸಾಗುತ್ತಿದೆ. ಇತ್ತೀಚೆಗೆ ಚಿತ್ರದ ಹಾಡೊಂದರ ಚಿತ್ರೀಕರಣ ನಡೆದಿದ್ದು, ಈ ಹಾಡಿನಲ್ಲಿ ಲೂಸ್‌ ಮಾದ ಯೋಗಿ ಕೂಡಾ ಕಾಣಿಸಿಕೊಂಡಿದ್ದಾರೆ. “ರಾಜರಾಣಿ’ ಚಿತ್ರದಲ್ಲಿ ರಣಧೀರ ಅವರು ನಾಯಕರಾಗಿ ನಟಿಸುವ ಜೊತೆಗೆ ನಿರ್ದೇಶನ ಕೂಡಾ ಮಾಡಿದ್ದಾರೆ.

Advertisement

ರಾಜನಕುಂಟೆ ಬಯಲು ಭೂಮಿಯಲ್ಲಿ ಹಾಕಲಾಗಿದ್ದ ಸೆಟ್‌ನಲ್ಲಿ ಆಂಜನೇಯ ಮೂರ್ತಿ ಮುಂದೆ “ತಳ ತಳ, ಎಲ್ಲಾ ಕಡೆ ನಿನ್ನ ಹಾಡೇ, ತುಂಬೋಗಿರೆ ನಾಡು ನಾಡೇ, ಏನಿಟ್ಟರೇ ನಿನ್ನ ಕಡೆ, ನಿತ್ಯಾ ಜನ ನಿನ್ನಾ ಎಡೆ..’ ಹಾಡನ್ನು ಚಿತ್ರೀಕರಿಸಲಾಯಿತು.

ಚಿತ್ರದ ಬಗ್ಗೆ ಮಾತನಾಡುವ ನಿರ್ದೇಶಕ ರಣಧೀರ, “ಹದಿನೈದು ವರ್ಷಗಳ ಹಿಂದೆ ಮೈಸೂರಿನಲ್ಲಿ ನಡೆದಂತ ಸತ್ಯ ಘಟನೆಯನ್ನು ಚಿತ್ರರೂಪಕ್ಕೆ ತರಲಾಗಿದೆ. ಇಬ್ಬರು ನಾಯಕರುಗಳ ನಡುವೆ ಕಾಣೆಯಾದ ಹುಡುಗಿಯ ಸುತ್ತ ಚಿತ್ರವು ಸಾಗುತ್ತದೆ. ಕುಟುಂಬ ಸಮೇತ ನೋಡಬಹುದಾದ ದೃಶ್ಯಗಳು ಇರಲಿದೆ. ಕಾಣೆಯಾದವಳು ಯಾರಿಗೆ ಒಲಿಯುತ್ತಾಳೆ? ಎನ್ನುವ ನಿಗೂಢ ಅಂಶಗಳು ಇರಲಿದೆ. ಬೆಂಗಳೂರು, ಮಾಲೂರು, ಕೋಲಾರ, ಚಿಕ್ಕಮಗಳೂರು, ದೊಡ್ಡಬಳ್ಳಾಪುರ ಕಡೆಗಳಲ್ಲಿ 56 ದಿನಗಳ ಕಾಲ ಶೂಟಿಂಗ್‌ ನಡೆಸಲಾಗಿದೆ’ ಎಂದು ಚಿತ್ರದ ವಿವರ ನೀಡಿದರು.

Advertisement

Udayavani is now on Telegram. Click here to join our channel and stay updated with the latest news.

Next