Advertisement

ರಾಣೆಬೆನ್ನೂರು ಉಪಚುನಾವಣೆ ತಡೆಯಾಜ್ಞೆಗೆ ವಾದ: ಶಂಕರ್‌

10:42 PM Sep 25, 2019 | Team Udayavani |

ಬೆಂಗಳೂರು: “ನಾನು ಅಧಿಕೃತವಾಗಿ ಕಾಂಗ್ರೆಸ್‌ ಸೇರದಿರುವುದರಿಂದ ನನ್ನ ಕ್ಷೇತ್ರದಲ್ಲಿ ಉಪ ಚುನಾವಣೆ ನಡೆಯುವುದಿಲ್ಲ’ ಎಂದು ರಾಣೆಬೆನ್ನೂರು ಅನರ್ಹ ಶಾಸಕ ಆರ್‌.ಶಂಕರ್‌ ಸ್ಪಷ್ಟಪಡಿಸಿದ್ದಾರೆ. ದೆಹಲಿಯಲ್ಲಿ ಮಾತನಾಡಿದ ಅವರು, ನಾನು ಕಾಂಗ್ರೆಸ್‌ ಸೇರಿಕೊಳ್ಳುವ ಪ್ರಕ್ರಿಯೆ ಪೂರ್ಣಗೊಳ್ಳದಿದ್ದರೂ ನನ್ನನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸಿದ್ದಾರೆ. ಹೀಗಾಗಿ ರಾಣೆಬೆನ್ನೂರು ಕ್ಷೇತ್ರದ ಉಪ ಚುನಾವಣೆಗೆ ತಡೆಯಾಜ್ಞೆ ನೀಡುವಂತೆ ಕೋರ್ಟ್‌ ಮುಂದೆ ತಮ್ಮ ಪರ ವಕೀಲರು ವಾದ ಮಂಡಿಸಿದ್ದಾರೆಂದರು.

Advertisement

17 ಅನರ್ಹ ಶಾಸಕರ ಪೈಕಿ 15 ಕ್ಷೇತ್ರಗಳಿಗೆ ಉಪ ಚುನಾವಣೆ ಘೋಷಣೆಯಾಗಿದ್ದು, ತಾವು ಕೆಪಿಜೆಪಿಯನ್ನು ಕಾಂಗ್ರೆಸ್‌ ಜೊತೆಗೆ ವಿಲೀನ ಪ್ರಕ್ರಿಯೆ ಮುಗಿ ಯುವ ಮೊದಲೇ ಸ್ಪೀಕರ್‌ ಆಗಿದ್ದ ರಮೇಶ್‌ ಕುಮಾರ್‌ ತಮ್ಮನ್ನು ಅನರ್ಹಗೊಳಿಸಿದ್ದಾರೆ. ನಾನು ಅಧಿಕೃತ ಕಾಂಗ್ರೆಸ್‌ ಶಾಸಕ ಅಲ್ಲದಿರುವುದರಿಂದ ತಮ್ಮ ಅನರ್ಹತೆ ರದ್ದುಗೊಳಿಸಬೇಕು, ತಮ್ಮ ಕ್ಷೇತ್ರದ ಉಪ ಚುನಾವಣೆ ತಡೆ ಹಿಡಿಯಬೇಕು, ಇಲ್ಲವೇ ವಿಚಾರಣೆ ಮುಗಿಯುವವರೆಗೆ ಚುನಾವಣೆ ಮುಂದೂಡಬೇಕು ಎಂದು ವಕೀಲರ ಮೂಲಕ ಸುಪ್ರೀಂ ಕೋರ್ಟ್‌ಗೆ ಪ್ರತ್ಯೇಕ ಅರ್ಜಿ ಸಲ್ಲಿಸಿ ಮನವಿ ಮಾಡಲಾಗಿದೆ ಎಂದು ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next