Advertisement

“ರಂಗ್‌ ದ ಬರ್ಸಾ’ಕಾರ್ಯಕ್ರಮಕ್ಕೆ ಅಡ್ಡಿ, ದಾಂಧಲೆ ಪ್ರಕರಣ: ಆರೋಪಿಗಳಿಗೆ ಜಾಮೀನು

10:40 PM Mar 27, 2023 | Team Udayavani |

ಮಂಗಳೂರು: ನಗರದ ಮರೋಳಿಯಲ್ಲಿ ರವಿವಾರ ಹೋಳಿ ಪ್ರಯುಕ್ತ ಆಯೋಜಿಸಲಾಗಿದ್ದ “ರಂಗ್‌ ದ ಬರ್ಸಾ’ ಕಾರ್ಯಕ್ರಮಕ್ಕೆ ಅಡ್ಡಿಪಡಿಸಿ ದಾಂಧಲೆ ನಡೆಸಿದ ಬಜರಂಗ ದಳ ಕಾರ್ಯಕರ್ತರಿಗೆ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.

Advertisement

ಯುವಕ-ಯುವತಿಯರು ಅಶ್ಲೀಲವಾಗಿ ನಡೆದುಕೊಳ್ಳುತ್ತಾರೆ, ಅನ್ಯಕೋಮಿನ ಯುವಕರು ಕೂಡ ಪಾಲ್ಗೊಳ್ಳುತ್ತಾರೆ ಎಂದು ಆಕ್ಷೇಪಿಸಿ ಬಜರಂಗ ದಳದ ಆರು ಮಂದಿ ಕಾರ್ಯಕರ್ತರು ಸ್ಥಳಕ್ಕೆ ತೆರಳಿ ಆಯೋಜಕರನ್ನು ತರಾಟೆಗೆ ತೆಗೆದುಕೊಂಡಿದ್ದರು. ಕಾರ್ಯಕ್ರಮಕ್ಕೆ ಹಾಕಲಾಗಿದ್ದ ಬ್ಯಾನರ್‌ ಹರಿದು ಹಾಕಿದ್ದರು. ಕಂಕನಾಡಿ ನಗರ ಠಾಣಾ ಪೊಲೀಸರು ಅವರನ್ನು ವಶಕ್ಕೆ ಪಡೆದುಕೊಂಡಿದ್ದರು. ಸೋಮವಾರ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು ಜಾಮೀನಿನ ಮೇಲೆ ಬಿಡುಗಡೆಗೊಂಡಿದ್ದಾರೆ.

ಇದನ್ನೂ ಓದಿ: ಉತ್ತರ ಪ್ರದೇಶದ ದರೋಡೆಕೋರ ಅತೀಕ್ ಅಹ್ಮದ್ ಸುರಕ್ಷಿತವಾಗಿ ನೈನಿ ಜೈಲಿಗೆ ಸ್ಥಳಾಂತರ

Advertisement

Udayavani is now on Telegram. Click here to join our channel and stay updated with the latest news.

Next