ರಾಣಿಬೆನ್ನೂರ: ಪ್ರಸ್ತುತ ದಿನಮಾನಗಳಲ್ಲಿ ಮಹಿಳೆಯರು ರಾಜಕೀಯ, ಶಿಕ್ಷಣ, ಸಾಮಾಜಿಕ ಕ್ಷೇತ್ರಗಳಲ್ಲಿ ಗುರುತಿಸಿಕೊಳ್ಳುವ ಮೂಲಕ ತಾನು ಅಬಲೆಯಲ್ಲ ಸಬಲೆ ಎಂದು ನಿರೂಪಿಸಿದ್ದಾಳೆ ಎಂದು ಕಾಕಿ ಸೌಹಾರ್ದ ಸಹಕಾರಿ ನಿಯಮಿತದ ಅಧ್ಯಕ್ಷೆ ರೂಪಾ ಶ್ರೀನಿವಾಸ ಕಾಕಿ ಹೇಳಿದರು.
Advertisement
ನಗರದ ನೀಲಕಂಠೇಶ್ವರ ದೇವಸ್ಥಾನ ಆವರಣದ ಕಾಕಿ ಜನಸೇವಾ ಸಂಸ್ಥೆಯ ಗಣೇಶೋತ್ಸವ ಮಂಟಪದಲ್ಲಿ ದೇವಾಂಗ ಮಹಿಳಾ ಸಂಘದ ವತಿಯಿಂದ ಆಯೋಜಿಸಿದ್ದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಸಮಾರಂಭದಲ್ಲಿ ಮಾತನಾಡಿದ ಅವರು, ಮಹಿಳೆಯರು ಶೋಷಣೆಯ ನಡುವೆಯೂ ಪುರುಷ ಪ್ರಧಾನ ಕಾಲದಿಂದಲೂ ನಿರಂತರ ಹೋರಾಟ ಮನೋಭಾವ ಹೊಂದುವ ಮೂಲಕ ಕುಟುಂಬದ ಗೃಹಣಿಯಾಗಿ, ತಾಯಿಯಾಗಿ, ಮಡದಿಯಾಗಿ ಕೌಟುಂಬಿಕ ಜವಾಬ್ದಾರಿ ನಿಭಾಯಿಸುವುದರ ಜೊತೆಗೆ ದೇಶಮುನ್ನಡೆಸುವ ಮೂಲಕ ನಾರಿಶಕ್ತಿಯನ್ನು ಇಡೀ ಪ್ರಪಂಚಕ್ಕೆ ತೋರ್ಪಡಿಸಿರುವುದು ಹೆಮ್ಮೆಯ ಸಂಗತಿಯಾಗಿದೆ ಎಂದರು.