Advertisement

ಶಿವಮೊಗ್ಗಕ್ಕೆ ಆಗಮಿನಿಸಿದ ರಣಜಿ ಆಟಗಾರರು

07:20 AM Oct 23, 2017 | |

ಶಿವಮೊಗ್ಗ: ಕರ್ನಾಟಕ ಹಾಗೂ ಹೈದರಾಬಾದ್‌ ನಡುವಿನ ರಣಜಿ ಟ್ರೋಫಿ ಪಂದ್ಯಾವಳಿ ಅ.24 ರಿಂದ ನಗರದ ಕೆಎಸ್‌ಸಿಎ ಕ್ರೀಡಾಂಗಣದಲ್ಲಿ ನಡೆಯಲಿದೆ. ಉಭಯ ತಂಡಗಳ ಆಟಗಾರರು ನಗರದಲ್ಲಿ ಬೀಡು ಬಿಟ್ಟಿದ್ದಾರೆ.ಎರಡೂ ತಂಡಗಳ ಆಟಗಾರರು ಶನಿವಾರ ರಾತ್ರಿ ನಗರಕ್ಕೆ ಆಗಮಿಸಿದರು. ಆಟಗಾರರಿಗೆ ಇಲ್ಲಿನ ಖಾಸಗಿ ಹೋಟೆಲ್‌ನಲ್ಲಿ ಉಳಿದುಕೊಳ್ಳುವ ವ್ಯವಸ್ಥೆ ಕಲ್ಪಿಸಲಾಗಿದೆ.

Advertisement

ಅಭ್ಯಾಸ ನಡೆಸಿದ ಆಟಗಾರರು:
ಕರ್ನಾಟಕ ಹಾಗೂ ಹೈದರಾಬಾದ್‌ ತಂಡಗಳ ಆಟಗಾರರು ಭಾನುವಾರ ಕೆಲಕಾಲ ಮೈದಾನದಲ್ಲಿ ಅಭ್ಯಾಸ ನಡೆಸಿದರು. ಮತ್ತೆ ಕೆಲಸಮಯ ಫುಟ್‌ಬಾಲ್‌ ಆಡಿದರು. ತಮ್ಮ ನೆಚ್ಚಿನ ಆಟಗಾರರನ್ನು ನೋಡಲು ಕ್ರಿಕೆಟ್‌ ಅಭಿಮಾನಿಗಳು ಕ್ರೀಡಾಂಗಣದತ್ತ ಹೆಜ್ಜೆ ಹಾಕುತ್ತಿದ್ದ ದೃಶ್ಯ ಸಾಮಾನ್ಯವಾಗಿತ್ತು. ಕ್ರಿಕೆಟ್‌ ಕಾಶಿ ಲಾರ್ಡ್ಸ್‌ ಮೈದಾನದ ಮಾದರಿಯಲ್ಲಿಯೇ ನವುಲೆಯಲ್ಲಿ ನೂತನವಾಗಿ ಕೆಎಸ್‌ಸಿಎ ಕ್ರೀಡಾಂಗಣ ನಿರ್ಮಾಣಗೊಂಡಿದೆ. ಇಲ್ಲಿ ಇದೇ ಪ್ರಥಮ ಬಾರಿಗೆ ರಣಜಿ ಪಂದ್ಯ ಆಯೋಜನೆಗೊಂಡಿದೆ.

Advertisement

Udayavani is now on Telegram. Click here to join our channel and stay updated with the latest news.

Next