Advertisement

ಅತ್ಯಾಚಾರಗೈದು ಹತ್ಯೆ: ಅಪರಾಧಿಗೆ ಕಠಿನ ಜೀವಾವಧಿ ಶಿಕ್ಷೆ

11:09 PM Jun 28, 2023 | Team Udayavani |

ಮಂಗಳೂರು: ಮಹಿಳೆಯ ಅತ್ಯಾಚಾರ, ಹತ್ಯೆ ನಡೆಸಿದ ಪ್ರಕರಣದ ಅಪರಾಧಿಗೆ ಮಂಗಳೂರಿನ 6ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ಕಾಂತರಾಜು ಎಸ್‌.ವಿ. ಅವರು ಕಠಿನ ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ನೀಡಿದ್ದಾರೆ.

Advertisement

ಮಂಜೇಶ್ವರ ಪಾತೂರು ವರ್ಕಾಡಿ ಬದಿಮಾಲೆ ನಿವಾಸಿ ಮಹಮ್ಮದ್‌ ಅಶ್ರಫ್‌ ಯಾನೆ ಅಶ್ರಫ್‌ (33) ಶಿಕ್ಷೆಗೊಳಗಾದವ. ಈತ 2020ರ ಸೆ.24ರಂದು ಬಾಳೆಪುಣಿ ಗ್ರಾಮದ ಬೆಳ್ಕೆರಿಯ ಒಂಟಿ ಮಹಿಳೆಯ ಮನೆಗೆ ಅಕ್ರಮವಾಗಿ ಪ್ರವೇಶಿಸಿ ಅತ್ಯಾಚಾರವೆಸಗಿ ಹತ್ಯೆಗೈದಿದ್ದ. ಬಳಿಕ ಬೆಂಕಿ ಹಚ್ಚಿ ಸಾಕ್ಷ್ಯ ನಾಶ ಮಾಡಿದ್ದ. ಚಿನ್ನ, ಹಣ ದೋಚಿ ಪರಾರಿಯಾಗಿದ್ದ.

ವಿಚಾರಣೆ ನಡೆಸಿದ ನ್ಯಾಯಾಧೀಶರು ಅಪರಾಧಿಗೆ ಐಪಿಸಿ ಕಲಂ 302ರಡಿ ಕಠಿನ ಜೀವಾವಧಿ ಶಿಕ್ಷೆ ಮತ್ತು 1 ಲ.ರೂ. ದಂಡ, ದಂಡ ಪಾವತಿಸಲು ತಪ್ಪಿದರೆ ಹೆಚ್ಚುವರಿ 2 ವರ್ಷ ಸಜೆ, ಕಲಂ 448ರಡಿ 1 ವರ್ಷ ಕಠಿನ ಸಜೆ, 1,000 ರೂ. ದಂಡ, ದಂಡ ಪಾವತಿಸಲು ತಪ್ಪಿದರೆ ಹೆಚ್ಚುವರಿ 3 ತಿಂಗಳ ಸಜೆ, ಕಲಂ 376ರಡಿ 10 ವರ್ಷ ಕಠಿನ ಸಜೆ, 1 ಲ.ರೂ. ದಂಡ, ದಂಡ ಪಾವತಿಸಲು ತಪ್ಪಿದರೆ 1 ವರ್ಷ ಕಠಿನ ಸಜೆ, ಕಲಂ 392ರಡಿ 10 ವರ್ಷ ಕಠಿನ ಸಜೆ, 50,000 ರೂ. ದಂಡ, ದಂಡ ಪಾವತಿಸಲು ತಪ್ಪಿದರೆ 6 ತಿಂಗಳು ಹೆಚ್ಚುವರಿ ಕಠಿನ ಸಜೆ, ಕಲಂ 201ರಡಿ 7 ವರ್ಷ ಕಠಿನ ಸಜೆ, 50,000 ರೂ. ದಂಡ, ದಂಡ ಪಾವತಿಸಲು ತಪ್ಪಿದರೆ ಹೆಚ್ಚುವರಿ 1 ವರ್ಷ ದಂಡ ವಿಧಿಸಿದ್ದಾರೆ.

ಮಂಗಳೂರು ದಕ್ಷಿಣ ಉಪವಿಭಾಗ ಸಹಾಯಕ ಪೊಲೀಸ್‌ ಆಯುಕ್ತ ರಂಜಿತ್‌ ಕುಮಾರ್‌ ಬಂಡಾರು ವಿಶೇಷ ತನಿಖಾಧಿಕಾರಿಯಾಗಿದ್ದು, ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿ ಸಲ್ಲಿಸಿದ್ದರು.

ಸರಕಾರದ ಪರ ಅಭಿಯೋಜಕರಾದ ಜ್ಯೋತಿ ಪ್ರಮೋದ್‌ ನಾಯಕ್‌ ಮತ್ತು ಬಿ. ಶೇಖರ್‌ ಶೆಟ್ಟಿ ಅವರು ವಾದಿಸಿದ್ದರು.

Advertisement

 

Advertisement

Udayavani is now on Telegram. Click here to join our channel and stay updated with the latest news.

Next