Advertisement

ಅಪ್ರಾಪ್ತ ವಯಸ್ಕ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ: ಆರೋಪಿ ಸೆರೆ

09:19 AM Jul 06, 2019 | keerthan |

ಪುತ್ತೂರು: ಕಾಲೇಜು ವಿದ್ಯಾರ್ಥಿನಿ ಮೇಲಿನ ಸಾಮೂಹಿಕ ಅತ್ಯಾಚಾರದ ಘಟನೆಯ ಹಸಿನೆನಪಿನ ಮಧ್ಯೆಯೇ ಪುತ್ತೂರು ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಶಾಲಾ ವಿದ್ಯಾರ್ಥಿನಿ ಮೇಲೆ ಶುಕ್ರವಾರ ಅತ್ಯಾಚಾರ ನಡೆದಿದ್ದು, ಆರೋಪಿಯನ್ನು ಬಂಧಿಸಲಾಗಿದೆ.

Advertisement

“ನಿನ್ನ ತಾಯಿ ಗುಡ್ಡೆಯಲ್ಲಿ ತಲೆತಿರುಗಿ ಬಿದ್ದಿದ್ದಾರೆ’ ಎಂದು ನಂಬಿಸಿ ಪ್ರೌಢಶಾಲೆಯ ಅಪ್ರಾಪ್ತ ವಯಸ್ಸಿನ ವಿದ್ಯಾರ್ಥಿನಿಯೊಬ್ಬಳನ್ನು ಕರೆದೊಯ್ದ ಅಜಿತ್‌ (28) ಎಂಬಾತನು ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ಆರೋಪಿಸಲಾಗಿದೆ.

ಆರೋಪಿಯು ಬಾಲಕಿಯ ಬಾಯಿ ಮತ್ತು ಕುತ್ತಿಗೆಯನ್ನು ಒತ್ತಿ ಹಿಡಿದ ಕಾರಣ ಆಕೆ ಪ್ರಜ್ಞೆ ತಪ್ಪಿ ಬಿದ್ದಿದ್ದು, ಆ ಸ್ಥಿತಿಯಲ್ಲೇ ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ಹೇಳಲಾಗುತ್ತಿದೆ. ಬಳಿಕ ಬಾಲಕಿಯು ಭೀತಿ ಹಾಗೂ ಆಯಾಸದಿಂದ ಮನೆಗೆ ಹೋಗಿ ಮಲಗಿದ್ದು, ಇದನ್ನು ಗಮನಿಸಿ ಮನೆಯವರು ಪುತ್ತೂರು ಸರಕಾರಿ ಆಸ್ಪತ್ರೆಗೆ ಕರೆದುಕೊಂಡು ಬಂದರು. ಆಗ ಅತ್ಯಾಚಾರದ ವಿಷಯ ಬಹಿರಂಗವಾಯಿತು. ಬಾಲಕಿಯ ಕುತ್ತಿಗೆಗೆ ಗಂಭೀರ ಸ್ವರೂಪದ ಗಾಯವಾಗಿದ್ದರಿಂದ ಸಂಜೆ ಹೊತ್ತಿಗೆ ಆಕೆಯನ್ನು ಮಂಗಳೂರಿನ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ.

ಆರೋಪಿ ವಿವಾಹ ವಿಚ್ಛೇದಿತ
ಆರೋಪಿ ಮಾಟ್ನೂರು ಪಳನೀರು ನಿವಾಸಿ ಅಜಿತ್‌ ಪಿ. ಎಂಬಾತನನ್ನು ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ. ಆತ ನಿರ್ಮಾಣ ಕಾಮಗಾರಿಗಳ ಗುತ್ತಿಗೆದಾರನಾಗಿದ್ದು, ವಿವಾಹ ವಿಚ್ಛೇದಿತನಾಗಿದ್ದಾನೆ ಎಂಬ ಮಾಹಿತಿ ಲಭಿಸಿದೆ. ಆತನ ವಿರುದ್ಧ ಅತ್ಯಾಚಾರ, ದಲಿತ ದೌರ್ಜನ್ಯ ಹಾಗೂ ಪೋಕೊ ಕಾಯಿದೆಯಡಿ ಪ್ರಕರಣ ದಾಖಲಾಗಿದೆ.

ಎಸ್ಪಿ ಭೇಟಿ
ದ. ಕ. ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರ ಬಿ. ಎಂ. ಲಕ್ಷಿಪ್ರಸಾದ್‌ ಅವರು ಪುತ್ತೂರಿಗೆ ಭೇಟಿ ನೀಡಿ ಆಸ್ಪತ್ರೆಯಲ್ಲಿ ದಾಖಲಾಗಿರುವ ಬಾಲಕಿಯ ಆರೋಗ್ಯದ ಕುರಿತು ವಿಚಾರಿಸಿದರು. ಅನಂತರ ಸಂಪ್ಯದಲ್ಲಿರುವ ಗ್ರಾಮಾಂತರ ಠಾಣೆಗೆ ತೆರಳಿ ಆರೋಪಿಯನ್ನು ವಿಚಾರಣೆಗೆ ಒಳಪಡಿಸಿದ್ದಾರೆ. ಪುತ್ತೂರು ಡಿವೈಎಸ್ಪಿ ದಿನಕರ ಶೆಟ್ಟಿ ಪ್ರಕರಣದ ಮುಂದಿನ ತನಿಖೆ ನಡೆಸುತ್ತಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next