Advertisement

ಸಿಆರ್‌ಝಡ್‌ನ‌ಲ್ಲಿ ಸಾಂಪ್ರದಾಯಿಕ ಮರಳುಗಾರಿಕೆಗೆ ಶೀಘ್ರ ಕ್ರಮ; ಸಚಿವ ಹಾಲಪ್ಪ ಬಸಪ್ಪ ಆಚಾರ್‌

01:59 AM Mar 24, 2022 | Team Udayavani |

ಉಡುಪಿ: ಕರಾವಳಿ ಭಾಗಕ್ಕೆ ಪ್ರತ್ಯೇಕ ಮರಳು ನೀತಿ ಜಾರಿಗೊಳಿಸುವ ಬಗ್ಗೆ ಹಾಗೂ ಸಿಆರ್‌ಝಡ್‌ ವ್ಯಾಪ್ತಿಯಲ್ಲಿ ಸಾಂಪ್ರದಾಯಿಕವಾಗಿ ಮಾನವ ಶ್ರಮದಿಂದ ಮುಳುಗಿ ಮರಳು ತೆಗೆಯಲು ಅವಕಾಶ ಕಲ್ಪಿಸುವ ಬಗ್ಗೆ ಶೀಘ್ರದಲ್ಲೇ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಗಣಿ ಮತ್ತು ಭೂ ವಿಜ್ಞಾನ ಸಚಿವ ಹಾಲಪ್ಪ ಬಸಪ್ಪ ಆಚಾರ್‌ ಭರವಸೆ ನೀಡಿದರು.

Advertisement

ಹಾಲಪ್ಪ ಬಸಪ್ಪ ಆಚಾರ್‌ ಅಧ್ಯಕ್ಷತೆಯಲ್ಲಿ ಬುಧವಾರ ಬೆಂಗಳೂರಿನಲ್ಲಿ ನಡೆದ ಸಭೆಯಲ್ಲಿ ಇಲಾಖೆ ಪ್ರಧಾನ ಕಾರ್ಯದರ್ಶಿ ಪಂಕಜ್‌ ಕುಮಾರ್‌ ಪಾಂಡೆ, ನಿರ್ದೇಶಕ ರಾಮಮನೋಹರ ಪ್ರಸನ್ನ ಉಪಸ್ಥಿತರಿದ್ದರು.
ಕರಾವಳಿ ಭಾಗದ ಸಿಆರ್‌ಝಡ್‌ ವ್ಯಾಪ್ತಿಯಲ್ಲಿ ಸಾಂಪ್ರದಾಯಿಕವಾಗಿ ಮಾನವ ಶ್ರಮದಿಂದ ಮುಳುಗಿ ಮರಳು ತೆಗೆಯಲು ಅವಕಾಶ ಕಲ್ಪಿಸಬೇಕು ಎಂದು ಶಾಸಕ ಕೆ. ರಘುಪತಿ ಭಟ್‌ ಆಗ್ರಹಿಸಿದರು.

ಇದನ್ನೂ ಓದಿ:ಸಚಿವ ರಾಮುಲು ಅವರೊಂದಿಗೆ ಖಾಸಗಿ ಬಸ್‌ ಮಾಲಕರ ಒಕ್ಕೂಟದ ಸಭೆ

ಪುತ್ತೂರು ಶಾಸಕ ಸಂಜೀವ ಮಠಂದೂರು ಮಾತನಾಡಿ, ಕರಾವಳಿ ಭಾಗದಲ್ಲಿ ಮರಳು ತೆಗೆಯುವಲ್ಲಿ ಇರುವ ಸಮಸ್ಯೆಗಳ ಬಗ್ಗೆ ಪ್ರಸ್ತಾವಿಸಿ, ಶೀಘ್ರದಲ್ಲಿ ಸೂಕ್ತ ಪರಿಹಾರ ಕಲ್ಪಿಸುವಂತೆ ಮನವಿ ಮಾಡಿದರು.

ಪ್ರತ್ಯೇಕ ಮರಳು ನೀತಿ ಜಾರಿಗೊಳಿಸುವ ಬಗ್ಗೆ ಚರ್ಚಿಸಿ ಸಿಆರ್‌ಝಡ್‌ ವ್ಯಾಪ್ತಿಯಲ್ಲಿ ಮರಳು ತೆಗೆಯಲು ಇರುವ ಕೆಲವೊಂದು ತಾಂತ್ರಿಕ ಸಮಸ್ಯೆಗಳನ್ನು ಸರಿಪಡಿಸಿ ಸುಗಮಗೊಳಿಸುವ ಬಗ್ಗೆ ಚರ್ಚಿಸಲಾಯಿತು.

Advertisement
Advertisement

Udayavani is now on Telegram. Click here to join our channel and stay updated with the latest news.

Next