Advertisement

ಶೀಘ್ರ ರಾಜ್ಯಾಧ್ಯಕ್ಷರ ನೇಮಕ: ಎಚ್‌ಡಿಡಿ

10:46 PM Jun 24, 2019 | Team Udayavani |

ಬೆಂಗಳೂರು: ಮೂರ್‍ನಾಲ್ಕು ದಿನದಲ್ಲಿ ಜೆಡಿಎಸ್‌ ನೂತನ ರಾಜ್ಯಾಧ್ಯಕ್ಷರ ನೇಮಕ ಮಾಡಲಾಗುವುದು. ವಿಶ್ವನಾಥ್‌ ಅವರಿಂದಲೇ ಹೊಸ ಅಧ್ಯಕ್ಷರಿಗೆ ಬಾವುಟ ಕೊಡಿಸಿ ಅಧಿಕಾರ ಹಸ್ತಾಂತರ ಮಾಡಿಸುತ್ತೇನೆಂದು ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರು ತಿಳಿಸಿದ್ದಾರೆ.

Advertisement

ಪಕ್ಷದ ಕಚೇರಿಯಲ್ಲಿ ಸೋಮವಾರ ವಿಧಾನಸಭೆ ಚುನಾವಣೆಯಲ್ಲಿ ಸೋತ ಅಭ್ಯರ್ಥಿಗಳ ಸಭೆಯ ನಂತರ ಮಾತನಾಡಿದ ಅವರು, ನಾನು ಲೋಕಸಭೆ ಚುನಾವಣೆಯಲ್ಲಿ ಸೋತಿರುವುದರಿಂದ ಪಾರ್ಟಿಮೆಂಟ್‌ನಿಂದ ನನಗೆ ರಜೆ ಸಿಕ್ಕಿದೆ. ಹೀಗಾಗಿ, ಪಕ್ಷ ಸಂಘಟನೆಯಲ್ಲಿ ತೊಡಗಿಕೊಳ್ಳುತ್ತೇನೆ ಎಂದು ಹೇಳಿದರು.

ಕುಮಾರಸ್ವಾಮಿಯವರಿಗೆ ರಾಜ್ಯಾಧ್ಯಕ್ಷ ಸ್ಥಾನ ನೀಡುವ ಪ್ರಸ್ತಾಪ ಕುರಿತು ಪ್ರತಿಕ್ರಿಯಿಸಿ, ಒಬ್ಬರಿಗೆ ಒಂದೇ ಹುದ್ದೆ ಎಂದು ಪಕ್ಷದಲ್ಲಿ ನಿರ್ಧಾರ ಆಗಿದೆ. ಹಿಂದೆ ನಾನೇ ರಾಜೀನಾಮೆ ನೀಡಿ ಸಿ.ಎಂ.ಇಬ್ರಾಹಿಂರನ್ನು ಅಧ್ಯಕ್ಷರನ್ನಾಗಿ ಮಾಡಿದ್ದೆ ಎಂದು ತಿಳಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next