Advertisement

Sandalwood ಗುಡ್‍ನ್ಯೂಸ್ ಕೊಟ್ಟ ರ‍್ಯಾಪರ್ ಚಂದನ್ ಶೆಟ್ಟಿ

05:48 PM Aug 18, 2023 | Team Udayavani |

ಕನ್ನಡದ ರ‍್ಯಾಪರ್ ಚಂದನ್ ಶೆಟ್ಟಿ ತಮ್ಮ ಅಭಿಮಾನಿಗಳಿಗೆ ಸಿಹಿಸುದ್ದಿ ಕೊಟ್ಟಿದ್ದಾರೆ. `ಎಲ್ರ ಕಾಲೆಳಿಯುತ್ತೆ ಕಾಲ’ಎನ್ನುತ್ತಲೇ ಹೀರೋ ಪಟ್ಟಕ್ಕೇರಿ ಕುಳಿತ ಚಂದನ್, `ಸೂತ್ರಧಾರಿ’ಯಾಗಿ ಸಂಚಲನ ಮೂಡಿಸುವ ಮುನ್ನವೇ ಮಗದೊಂದು ಚಿತ್ರಕ್ಕೆ ಸಹಿ ಹಾಕಿದ್ದಾರೆ.

Advertisement

ಚೊಚ್ಚಲ ಸಿನಿಮಾ ಬಿಡುಗಡೆಗೂ ಮೊದಲೇ ಹ್ಯಾಟ್ರಿಕ್ ಚಿತ್ರದ ಅಪ್‍ಡೇಟ್ ನೀಡುವ ಮೂಲಕ ಸ್ಯಾಂಡಲ್‍ವುಡ್ ಅಂಗಳದಲ್ಲಿ ಶೆಟ್ರು ಸೆನ್ಸೇಷನ್ ಕ್ರಿಯೇಟ್ ಮಾಡಿದ್ದಾರೆ. ಟೈಟಲ್ ರಿವೀಲ್‍ಗೆ ಮುಹೂರ್ತ ಫಿಕ್ಸ್ ಮಾಡಿರೋ ಶೆಟ್ರು, ವರಮಹಾಲಕ್ಷ್ಮೀ ಹಬ್ಬಕ್ಕೆ ಶೀರ್ಷಿಕೆ ಸಮೇತ ಸರ್ ಪ್ರೈಸ್ ಕೊಡುವುದಾಗಿ ಹೇಳಿಕೊಂಡಿದ್ದಾರೆ.

ಈಗಾಗಲೇ ಶೆಟ್ರು ಎರಡು ಸಿನಿಮಾಗಳಲ್ಲಿ ನಾಯಕನಟನ ಪಾತ್ರಕ್ಕೆ ಬಣ್ಣ ಹಚ್ಚಿದ್ದಾರೆ. ಆದರೆ, ಆ ಎರಡು ಚಿತ್ರಗಳು ಪ್ರೇಕ್ಷಕರ ಮುಂದೆ ಬರುವ ಮೊದಲೇ ಶೆಟ್ರಿಗೆ ಮತ್ತೊಂದು ಸಿನಿಮಾದಲ್ಲಿ ನಾಯಕನಟನಾಗಿ ಖದರ್ ತೋರಿಸುವ ಚಾನ್ಸ್ ಸಿಕ್ಕಿದೆ. ಆಗಸ್ಟ್ 25ರಂದು ಅಧಿಕೃತವಾಗಿ ಈ ಚಿತ್ರದ ಟೈಟಲ್ ಘೋಷಣೆಯಾಗಲಿದ್ದು, ಅರುಣ್ ಅಮುಕ್ತ ಎನ್ನುವವರು ಡೈರೆಕ್ಟ್ ಮಾಡಲಿದ್ದಾರೆ. ಈ ಹಿಂದೆ ರೋರಿಂಗ್ ಸ್ಟಾರ್ ಶ್ರೀಮುರುಳಿ ನಾಯಕರಾಗಿದ್ದ `ಲೂಸ್ ಗಳು’ ಚಿತ್ರವನ್ನು ನಿರ್ದೇಶನ ಮಾಡಿದ್ದರು. ಮೂಲತಃ ಆಡ್ ಫಿಲಂ ಮೇಕರ್ ಆಗಿರುವ ಅರುಣ್, ಕನ್ನಡ ಚಿತ್ರರಂಗದಲ್ಲಿ ಹತ್ತಾರು ವರ್ಷಗಳಿಂದ ಕಾರ್ಯ ನಿರ್ವಹಿಸಿದ್ದಾರೆ. ಈಗ ರ‍್ಯಾಪರ್ ಚಂದನ್ ಶೆಟ್ಟಿ ಜೊತೆ ಕೈಜೋಡಿಸುವ ಮೂಲಕ ಮತ್ತೆ ಸ್ಯಾಂಡಲ್‍ವುಡ್‍ಗೆ ಮರಳಿದ್ದಾರೆ.

ಇದೊಂದು ಟೀನೇಜ್ ಡ್ರಾಮವುಳ್ಳ ಕಥೆಯಾಗಿದ್ದು, ಚಂದನ್ ಶೆಟ್ಟಿ ಜೊತೆಗೆ ಅಮರ್, ಭಾವನಾ, ಮಾನಸಿ, ವಿವಾನ್, ಭವ್ಯ, ಸುನೀಲ್ ಪುರಾಣಿಕ್, ಅರವಿಂದ್ ರಾವ್, ಸಿಂಚನಾ, ರಘು ರಾಮನಕೊಪ್ಪ, ಪ್ರಶಾಂತ್ ಸಂಬರ್ಗಿ ಸೇರಿದಂತೆ ಹಲವರು ತಾರಾಗಣದಲ್ಲಿದ್ದಾರೆ. ಸುಬ್ರಹ್ಮಣ್ಯ ಕುಕ್ಕೆ, ಎ.ಸಿ. ಶಿವಲಿಂಗೇಗೌಡ ಬಂಡವಾಳ ಹೂಡಲಿದ್ದು, ಆಗಸ್ಟ್ 25ರಂದು ಸಿನಿಮಾ ಶೀರ್ಷಿಕೆ ಜತೆಗೆ ಇನ್ನೊಂದಿಷ್ಟು ಪ್ರಮುಖ ವಿಚಾರಗಳನ್ನು ಹಂಚಿಕೊಳ್ಳಲಿದ್ದಾರೆ.

Advertisement

ವಿಶೇಷ ಅಂದರೆ ಶೆಟ್ರ ಸಿನಿಮಾ ಜರ್ನಿ. ಕಳೆದ 10 ವರ್ಷಗಳ ಹಿಂದೆ ಚಂದನ್ ಗೀತೆ ರಚನೆಕಾರನಾಗಿ ಇಂಡಸ್ಟ್ರಿಗೆ ಎಂಟ್ರಿಕೊಟ್ಟರು. ಅಲೆಮಾರಿ ಚಿತ್ರದಿಂದ ಅಸಿಸ್ಟೆಂಟ್ ಮ್ಯೂಸಿಕ್ ಡೈರೆಕ್ಟರ್ ಆಗಿ ವೃತ್ತಿ ಆರಂಭಿಸಿ, ಇವತ್ತು ಕನ್ನಡ ಚಿತ್ರರಂಗದಲ್ಲಿ ಸಂಗೀತ ನಿರ್ದೇಶಕನಾಗಿ, ಗಾಯಕನಾಗಿ, ಬರಹಗಾರನಾಗಿ ಗುರ್ತಿಸಿಕೊಂಡಿದ್ದಾರೆ. ಸೂಪರ್ ಹಿಟ್ ಆಲ್ಬಂಗಳ ಮೂಲಕ ಸೈ ಎನಿಸಿಕೊಂಡು ಯಶಸ್ವಿ ರ‍್ಯಾಪರ್ ಆಗಿದ್ದಾರೆ. ಬಿಗ್‍ಬಾಸ್ ಮನೆಗೆ ಹೋಗಿಬಂದ್ಮೇಲೆ ಮತ್ತಷ್ಟು-ಮಗದಷ್ಟು ಖ್ಯಾತಿ ಪಡೆದಿರುವ ಶೆಟ್ರು, ಟೆಲಿವಿಷನ್ ಶೋಗಳಲ್ಲಿ ಜಡ್ಜ್ ಆಗಿ ಕೂತಿದ್ದಾರೆ.ಗಂಧದಗುಡಿಯ ಸೂಪರ್ ಸ್ಟಾರ್ ಚಿತ್ರಗಳಿಗೆ ಮ್ಯೂಸಿಕ್ ಕಂಪೋಸ್ ಮಾಡೋದ್ರ ಜತೆಗೆ ಬೆಳ್ಳಿಭೂಮಿ ಮೇಲೆ ತಾವು ನಾಯಕನಟನಾಗಿ ಮೆರವಣಿಗೆ ಹೊರಡಲು ಸಿದ್ದರಾಗಿದ್ದಾರೆ. ಬಿಗ್‍ಸ್ಕ್ರೀನ್ ಮೇಲೆ ತಮ್ಮ ಹೀರೋನ ನೋಡೋದಕ್ಕೆ ಅವರ ಅಭಿಮಾನಿಗಳು ಕಾತುರರಾಗಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next