Advertisement
ಕನ್ನಡ ಸಾಹಿತ್ಯ ಲೋಕದಲ್ಲಿ ಹೊಸ ಅಲೆಯನ್ನು ಸೃಷ್ಟಿಸಿರುವ ಪೂರ್ಣಚಂದ್ರ ತೇಜಸ್ವಿ ಅವರ “ಜುಗಾರಿ ಕ್ರಾಸ್’ ಒಂದು ಅಪರೂಪದ ರೋಮಾಂಚಕ ಕಾದಂಬರಿಯಾಗಿದೆ. ಮಲೆ ನಾಡಿನ ದಟ್ಟ ಅರಣ್ಯಗಳಲ್ಲಿ ನಡೆಯುವ ದಂಧೆಗಳ ಕುರಿತಾದ ಸಮಗ್ರ ಚಿತ್ರಣಗಳು ಇದರಲ್ಲಿವೆ.
Related Articles
Advertisement
ಈ ಹಂತದಲ್ಲಿ ದಂಪತಿಗೆ ಸಿಗುವ ಒಂದು ಕಡತವು ನಿಗೂಢ ಅರ್ಥಗಳ ಖಜಾನೆಯಾ ಗಿದ್ದು, ಕೆಂಪು ವಜ್ರದ ನಿಕ್ಷೇಪದ ಜಾಡನ್ನು ಒಳಗೊಂಡಿರುತ್ತದೆ. ಅದನ್ನು ಅರ್ಥೈಸಿಕೊಂಡ ಸುರೇಶನು ಮಾಹಿತಿಯನ್ನು ಯಾರೊಂದಿಗೂ ಹಂಚಿಕೊಳ್ಳಲಾಗದೆ ಇಕ್ಕಟ್ಟಿನಲ್ಲಿ ಸಿಲುಕುವ ಪರಿಯನ್ನು ತೇಜಸ್ವಿಯವರು ಓದುಗರ ಮನ ಮುಟ್ಟುವಂತೆ ವಿವರಿಸಿದ್ದಾರೆ.
ತೇಜಸ್ವಿ ಅವರಿಗೆ ಕಾಡಿನ ಮೇಲಿರುವ ಅತಿಯಾದ ಪ್ರೇಮವು ಕಾದಂಬರಿ ಯುದ್ದಕ್ಕೂ ಪ್ರತಿಬಿಂಬಿತವಾಗಿದೆ. ಆರಂಭದಲ್ಲಿ ಪಶ್ಚಿಮ ಘಟ್ಟದ ದಟ್ಟ ಕಾಡುಗಳು, ಘಾಟಿ ರಸ್ತೆಯ ತರಹೇ ವಾರಿ ದಂಧೆಗಳು, ಸಹ್ಯಾದ್ರಿ ಪರ್ವತಗಳ ವರ್ಣನೆಯಿದೆ. ಕಾದಂಬರಿಯ ಮಧ್ಯ ಭಾಗದಲ್ಲಿ ರೈಲು ಪ್ರಯಾಣದ ರುದ್ರ ಅನುಭವಗಳ ಸರಮಾಲೆಯನ್ನೇ ಕಟ್ಟಿ ಕೊಡಲಾಗಿದೆ. ಕೊನೆಯ ಹಂತದಲ್ಲಿ ಸುರಂಗ ಮಾರ್ಗದಲ್ಲಿ ಸಿಲುಕುವ ದಂಪತಿಯ ಪೀಕಲಾಟವನ್ನು ಕಣ್ಣಿಗೆ ಕಟ್ಟುವಂತೆ ಬಿಂಬಿಸಲಾಗಿದೆ.
ಕೊನೆಯಲ್ಲಿ ಕಾದಂಬರಿಗೆ ತಾರ್ಕಿಕ ಅಂತ್ಯ ಸಿಗುತ್ತದೆ. ಎಲ್ಲ ಮಾಹಿತಿಗಳು ಕೈಯಲ್ಲಿದ್ದರೂ ಏನೂ ಸಾಧಿಸಲಾಗದ ಸುರೇಶನ ಪರಿಸ್ಥಿತಿಯು ವಜ್ರದ ಬೆನ್ನೇರಿ ಹೊರಡುವ ಶೋಧಕರ ಪ್ರತಿರೂಪವೆಂಬಂತೆ ಭಾಸವಾಗುತ್ತದೆ. ಜತೆಗೆ ಕುಂಟರಾಮ, ಶೇಷಪ್ಪ ಹಾಗೂ ರಾಜಪ್ಪನ ಪಾತ್ರಗಳು ವಿಶೇಷವಾಗಿ ಗಮನ ಸೆಳೆಯುತ್ತವೆ. ಒಟ್ಟಾರೆಯಾಗಿ “ಜುಗಾರಿ ಕ್ರಾಸ್’ ಕಾದಂಬ ರಿಯು ಓದುಗರನ್ನು ಒಂದು ಕೌತುಕದ ಲೋಕಕ್ಕೆ ಕರೆದೊಯ್ಯುತ್ತದೆ. ಹಲವು ರೀತಿಯ ಮಾನಸಿಕ ಸಂಘರ್ಷವನ್ನು ಸೃಷ್ಟಿಸುವ ಈ ಕೃತಿಯು ಆ ಕೌತುಕಗಳಿಗೆ ಉತ್ತರ ಕೊಡುತ್ತಾ ಓದುಗರಿಗೆ ಅವ್ಯಕ್ತ ಸಾಹಿತ್ಯ ರುಚಿಯನ್ನು ನೀಡುವಲ್ಲಿ ಯಶಸ್ವಿಯಾಗಿದೆ.