Advertisement

ಸಂಚರಿಸುತ್ತಿದ್ದ ವಿಮಾನ ತುರ್ತು ಭೂಸ್ಪರ್ಶ: “ಸಾವಿನಿಂದ ತಪ್ಪಿಸಿಕೊಂಡಿದ್ದೇವೆ” ಎಂದ ರಶ್ಮಿಕಾ

12:40 PM Feb 18, 2024 | Team Udayavani |

ಮುಂಬಯಿ: ನಟಿ ರಶ್ಮಿಕಾ ಮಂದಣ್ಣ ಸಂಚರಿಸುತ್ತಿದ್ದ ವಿಮಾನದಲ್ಲಿ ತಾಂತ್ರಿಕ ದೋಷ ಕಂಡುಬಂದ ಹಿನ್ನೆಲೆಯಲ್ಲಿ  ತುರ್ತು ಭೂಸ್ಪರ್ಶ ಮಾಡಿದೆ. ಈ ಘಟನೆ ಬಗ್ಗೆ ಸ್ವತಃ ರಶ್ಮಿಕಾ ಅವರೇ ಪೋಟೋವೊಂದನ್ನು ಹಂಚಿಕೊಂಡಿದ್ದಾರೆ.

Advertisement

ರಶ್ಮಿಕಾ ಮಂದಣ್ಣ ಅವರು ಅವರು ಮುಂಬಯಿನಿಂದ – ಹೈದರಾಬಾದ್ ಗೆ ತೆರಳುತ್ತಿದ್ದರು. ಈ ಸಮಯದಲ್ಲಿ ಅವರು ಸಂಚರಿಸುತ್ತಿದ್ದ ವಿಸ್ತಾರ ಏರ್‌ ವಿಮಾನದಲ್ಲಿ ತಾಂತ್ರಿಕ ದೋಷ ಕಂಡು ಬಂದಿದೆ. ಈ ಹಿನ್ನೆಲೆಯಲ್ಲಿ 30 ನಿಮಿಷಗಳ ಬಳಿಕ ವಿಮಾನ ತುರ್ತು ಭೂಸ್ಪರ್ಶವಾಗಿದೆ. ವಿಮಾನ ಮರಳಿ ಛತ್ರಪತಿ ಶಿವಾಜಿ ಮಹಾರಾಜ್ ಇಂಟರ್ನ್ಯಾಷನಲ್ ನಿಲ್ದಾಣದಲ್ಲಿ ಭೂಸ್ಪರ್ಶವಾಗಿದೆ. ಈ ಘಟನೆಯಲ್ಲಿ ಯಾರಿಗೂ ತೊಂದರೆ ಆಗಿಲ್ಲ.

ಈ ಸಮಯದಲ್ಲಿ ರಶ್ಮಿಕಾ ಅವರೊಂದಿಗೆ ಸಹ ಪ್ರಯಾಣಿಕರಾಗಿ ನಟಿ ಶ್ರದ್ಧಾ ದಾಸ್ ಕೂಡ ಸಂಚರಿಸುತ್ತಿದ್ದರು. ಘಟನೆ ಬಳಿಕ ರಶ್ಮಿಕಾ ಶ್ರದ್ಧಾ ದಾಸ್ ಅವರೊಂದಿಗೆ ಫೋಟೋ ಹಂಚಿಕೊಂಡು “ಸಾವಿನಿಂದ ತಪ್ಪಿಸಿಕೊಂಡಿದ್ದೇವೆ” ಎಂದು ಬರೆದುಕೊಂಡಿದ್ದಾರೆ.

ʼಅನಿಮಲ್‌ʼ ಸಿನಿಮಾದ ಯಶಸ್ಸಿನಲ್ಲಿರುವ ರಶ್ಮಿಕಾ ಸದ್ಯ ʼಪುಷ್ಪ-2ʼ ಸಿನಿಮಾದಲ್ಲಿ ಬ್ಯುಸಿಯಾಗಿದ್ದಾರೆ.

 

Advertisement

 

Advertisement

Udayavani is now on Telegram. Click here to join our channel and stay updated with the latest news.

Next