Advertisement

ಸಿದ್ದರಾಮಯ್ಯ ಬಿಜೆಪಿಗೆ ಬರ್ತಾರೋ ಇಲ್ವೋ ಗೊತ್ತಿಲ್ಲ; ಆರ್‌.ಅಶೋಕ್‌

11:28 AM Nov 29, 2018 | Team Udayavani |

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಿಜೆಪಿಗೆ ಬರ್ತಾರೋ ಇಲ್ವೋ ಗೊತ್ತಿಲ್ಲ, ಆದರೆ ರಾಜಕಾರಣ ನಿಂತ ನೀರಲ್ಲ ಎಂದು ಮಾಜಿ ಡಿಸಿಎಂ ಆರ್‌.ಅಶೋಕ್‌ ಅವರು ಹೇಳಿಕೆ ನೀಡಿದ್ದಾರೆ.

Advertisement

ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಆರ್‌.ಅಶೋಕ್‌ ಸಿದ್ದರಾಮಯ್ಯ ಅವರು ನಮ್ಮ ಪಕ್ಷದವರನ್ನೇನು ಸಂಪರ್ಕಿಸಿಲ್ಲ. ಆದರೆ ರಾಜಕಾರಣದಲ್ಲಿ ಯಾರೂ ಶತ್ರುಗಳಲ್ಲ, ಮಿತ್ರರೂ ಅಲ್ಲ. ಪರಮ ಶತ್ರುವಾಗಿದ್ದ ದೇವೇಗೌಡರೊಂದಿಗೆ ಸಿದ್ದರಾಮಯ್ಯ ಹೋಗಿರುವುದೇ ಇದಕ್ಕೆ ಸಾಕ್ಷಿ ಎಂದರು. 

ಸಿಎಂ ವಿರುದ್ಧ ಕಿಡಿ 


ಗಡುವು ನೀಡುವುದು ದೇವರು, ರಾಜ್ಯದ ಜನತೆ, ಈ ಸರ್ಕಾರ ಹೆಚ್ಚು ದಿನ ಉಳಿಯುವುದಿಲ್ಲ. ಮುಖ್ಯಮಂತ್ರಿಗಳು ಬೇಜವಾಬ್ಧಾರಿತನ ತೋರುತ್ತಿದ್ದಾರೆ. ರೈತರ ಮೇಲೆ ಹರಿಹಾಯುತ್ತಿದ್ದಾರೆ, ಮಾಧ್ಯಮಗಳ ಮೇಲೆ ಹರಿಹಾಯುತ್ತಾರೆ, ವಿಷ್ಣು ವರ್ಧನ್‌ ಅವರ ಸ್ಮಾರಕ ವಿಚಾರದಲ್ಲೂ ಹರಿಹಾಯುತ್ತಾರೆ. ಮುಖ್ಯಮಂತ್ರಿ ಆದವರಿಗೆ ಸಹನೆ ಮುಖ್ಯ ಎಂದರು. 

Advertisement
Advertisement

Udayavani is now on Telegram. Click here to join our channel and stay updated with the latest news.

Next