Advertisement

National Lok Adalat: 16,862 ಪ್ರಕರಣ ಇತ್ಯರ್ಥ; 23.99 ಕೋ.ರೂ. ಪರಿಹಾರ ವಸೂಲಿ

01:03 AM Mar 18, 2024 | Team Udayavani |

ಮಂಗಳೂರು: ಕಾನೂನು ಸೇವೆಗಳ ಪ್ರಾಧಿಕಾರವು ದ.ಕ. ಜಿಲ್ಲಾ ಮತ್ತು ತಾಲೂಕು ನ್ಯಾಯಾಲಯಗಳ ಆವರಣದಲ್ಲಿ ಶನಿವಾರ ಹಮ್ಮಿಕೊಂಡಿದ್ದ “ರಾಷ್ಟ್ರೀಯ ಲೋಕ ಅದಾಲತ್‌’ ಕಾರ್ಯಕ್ರಮದಲ್ಲಿ ಒಟ್ಟು 16,862 ಪ್ರಕರಣಗಳು ರಾಜಿಯಾಗಿ 23,99, 16,264 ರೂ. ರಾಜಿ ಮೊತ್ತ ಪರಿಹಾರ ವಸೂಲಿ ಮಾಡಲಾಗಿದೆ.

Advertisement

ಅದಾಲತ್‌ನಲ್ಲಿ ಒಟ್ಟು 44 ಬೈಠಕ್‌ಗಳು ನಡೆದಿದ್ದು 23,997 ಪ್ರಕರಣಗಳನ್ನು ಪರಿಗಣಿಸಲಾಗಿತ್ತು. ವ್ಯಾಜ್ಯ ಪೂರ್ವ, ರಾಜಿಯಾಗಬಹುದಾದ ಅಪರಾಧ ಪ್ರಕರಣಗಳು, ಚೆಕ್‌ ಪ್ರಕರಣಗಳು, ಬ್ಯಾಂಕ್‌ ಪ್ರಕರಣಗಳು, ಮೋಟಾರು ವಾಹನ ಅಪಘಾತ ಪರಿಹಾರ ನ್ಯಾಯಾಧಿಕರಣದ ಪ್ರಕರಣಗಳು, ಸಿವಿಲ್‌ ಪ್ರಕರಣಗಳು, ಆಸ್ತಿ ವಿಭಾಗದ ಪ್ರಕರಣಗಳು ಹಾಗೂ ಇತರ ರಾಜಿಯಾಗಬಹುದಾದ ಪ್ರಕರಣಗಳನ್ನು ಇತ್ಯರ್ಥಪಡಿಸಲಾಯಿತು. ಈ ಅದಾಲತ್‌ನಲ್ಲಿ ಸಾರ್ವಜನಿಕರು ತಮ್ಮ ವ್ಯಾಜ್ಯಗಳು/ಪ್ರಕರಣಗಳನ್ನು ಯಾವುದೇ ನ್ಯಾಯಾಲಯದ ಶುಲ್ಕವಿಲ್ಲದೆ ಇತ್ಯರ್ಥಗೊಳಿಸಿಕೊಂಡಿದ್ದಾರೆ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರು ಹಾಗೂ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ರವೀಂದ್ರ ಎಂ. ಜೋಷಿ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಮತ್ತು ಹಿರಿಯ ಸಿವಿಲ್‌ ನ್ಯಾಯಾಧೀಶೆ ಶೋಭಾ ಬಿ.ಜಿ. ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next