Advertisement

ನಾಳೆ ರಾಷ್ಟ್ರೀಯ ಲೋಕ ಅದಾಲತ್‌

12:33 AM Jul 07, 2023 | Team Udayavani |

ಬೆಂಗಳೂರು: ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ವತಿಯಿಂದ ಜುಲೈ 8ರಂದು ರಾಜ್ಯಾದ್ಯಂತ ರಾಷ್ಟ್ರೀಯ ಲೋಕ ಅದಾಲತ್‌ ಹಮ್ಮಿಕೊಳ್ಳಲಾಗಿದ್ದು, ಅಂದಾಜು 20 ಲಕ್ಷ ಪ್ರಕರಣಗಳನ್ನು ವಿಲೇವಾರಿಗೆ ಗುರುತಿಸ ಲಾಗಿದೆ ಎಂದು ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಕಾರ್ಯನಿರ್ವಾಹಕ ಅಧ್ಯ ಕ್ಷರೂ ಆಗಿರುವ ಹೈಕೋರ್ಟ್‌ ಹಿರಿಯ ನ್ಯಾಯ ಮೂರ್ತಿ ಜಿ. ನರೇಂದರ್‌ ಅವರು ಗುರುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

Advertisement

ರಾಜಿ ಮಾಡಿಕೊಳ್ಳಬಹುದಾದ ನ್ಯಾಯಾಲಯಗಳಲ್ಲಿ ಬಾಕಿಯಿರುವ ಹಾಗೂ ವ್ಯಾಜ್ಯಪೂರ್ವ ಪ್ರಕರಣಗಳನ್ನು ಈ ಲೋಕ ಅದಾಲತ್‌ನಲ್ಲಿ ಇತ್ಯರ್ಥಪಡಿಸಿಕೊಳ್ಳಬಹುದು.

ಹೈಕೋರ್ಟ್‌ ಸಹಿತ ಎಲ್ಲ ಜಿಲ್ಲಾ ಮತ್ತು ತಾಲೂಕು ನ್ಯಾಯಾಲಯಗಳಲ್ಲಿ ಏಕಕಾಲಕಕ್ಕೆ ಲೋಕ ಅದಾಲತ್‌ ನಡೆಯಲಿದೆ. ಕೈಗಾರಿಕಾ ಕಾರ್ಮಿಕರ ವೇತನಕ್ಕೆ ಸಂಬಂಧಿಸಿದ ಕ್ಲೇಮುಗಳು, ಮೋಟಾರು ಅಪಘಾತ ಪರಿಹಾರ ನ್ಯಾಯಮಂಡಳಿ ಪ್ರಕರಣ, ಹಣಕಾಸು ಸಂಸ್ಥೆಗಳಿಗೆ ಸಂಬಂಧಿಸಿದ, ಚೆಕ್‌ ಬೌನ್ಸ್‌, ವೈವಾಹಿಕ, ಕೌಟುಂಬಿಕ ಪ್ರಕರಣಗಳೂ (ವಿಚ್ಛೇದನ ಹೊರತುಪಡಿಸಿ) ಸಹಿತ ರಾಜಿಯಾಗಬಹುದಾದ ಸಿವಿಲ್‌ ಮತ್ತು ಕ್ರಿಮಿನಲ್‌ ವ್ಯಾಜ್ಯಗಳನ್ನು ಈ ಅದಾಲತ್‌ನಲ್ಲಿ ಪರಿಗಣಿಸಲಾಗುತ್ತದೆ ಎಂದು ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next