Advertisement

ರಾಷ್ಟ್ರಪತಿ ಪದಕಕ್ಕೆ ಚಾಮರಾಜನಗರ ಇನ್‌ಸ್ಪೆಕ್ಟರ್ ಬಿ.ಪುಟ್ಟಸ್ವಾಮಿ ಆಯ್ಕೆ

06:18 PM Jan 25, 2021 | Team Udayavani |

ಚಾಮರಾಜನಗರ: ಪ್ರಶಂಸನೀಯ ಸೇವೆ ಸಲ್ಲಿಸಿದ ಪೊಲೀಸ್ ಸಿಬ್ಬಂದಿಗೆ ಗಣರಾಜ್ಯೋತ್ಸವದ ಅಂಗವಾಗಿ ನೀಡಲಾಗುವ ರಾಷ್ಟ್ರಪತಿಗಳ ಪದಕಕ್ಕೆ ಜಿಲ್ಲಾ ಮಹಿಳಾ ಪೊಲೀಸ್ ಠಾಣೆಯ ಇನ್‌ಸ್ಪೆಕ್ಟರ್ ಬಿ. ಪುಟ್ಟಸ್ವಾಮಿ ಆಯ್ಕೆಯಾಗಿದ್ದಾರೆ.

Advertisement

ರಾಜ್ಯದ 19 ಮಂದಿ ಪೊಲೀಸರು ರಾಷ್ಟ್ರಪತಿ ಪದಕಕ್ಕೆ ಆಯ್ಕೆಯಾಗಿದ್ದು, ಇವರಲ್ಲಿ ಜಿಲ್ಲೆಯ ಪೊಲೀಸ್ ಇನ್‌ಸ್ಪೆಕ್ಟರ್ ಪುಟ್ಟಸ್ವಾಮಿ ಸಹ ಸೇರಿದ್ದಾರೆ. ಪೊಲೀಸರು ಸಲ್ಲಿಸಿರುವ ಉತ್ತಮ ಸೇವೆಯನ್ನು ಪರಿಗಣಿಸಿ ರಾಷ್ಟ್ರಪತಿಗಳ ಪದಕಕ್ಕೆ ಆಯ್ಕೆ ಮಾಡಲಾಗುತ್ತದೆ.

ಪುಟ್ಟಸ್ವಾಮಿಯವರು ಪ್ರಸ್ತುತ ಮಹಿಳಾ ಠಾಣೆಯಲ್ಲಿ ಇನ್‌ಸ್ಪೆಕ್ಟರ್ ಆಗಿ ಸೇವೆಸಲ್ಲಿಸುತ್ತಿದ್ದಾರೆ. ಜಿಲ್ಲೆಯ ಕೊಳ್ಳೇಗಾಲ ಗ್ರಾಮಾಂತರ, ಚಾಮರಾಜನಗರ ಪೂರ್ವ ಠಾಣೆಗಳಲ್ಲಿ ಸಬ್ ಇನ್‌ಸ್ಪೆಕ್ಟರ್ ಆಗಿ, ಜಿಲ್ಲಾ ಸೈಬರ್ ಅಪರಾಧ, ಆರ್ಥಿಕ ಮತ್ತು ನಾರ್ಕೊಟಿಕ ಅಪರಾಧ ಠಾಣೆಯ ಇನ್‌ಸ್ಪೆಕ್ಟರ್ ಆಗಿ ಸೇವೆ ಸಲ್ಲಿಸಿದ್ದಾರೆ. ಅವರ ಒಟ್ಟೂ ಸೇವೆಯನ್ನು ಪರಿಗಣಿಸಿ ಈ ಪುರಸ್ಕಾರಕ್ಕೆ ಅವರನ್ನು ಆಯ್ಕೆ ಮಾಡಲಾಗಿದೆ.

ಇದನ್ನೂ ಓದಿ:ರಾಷ್ಟ್ರಧ್ವಜ-ರಾಷ್ಟ್ರಗೀತೆ ನಿಯಮ ಕಡ್ಡಾಯವಾಗಿ ಪಾಲಿಸಲು ಸಲಹೆ

Advertisement

Udayavani is now on Telegram. Click here to join our channel and stay updated with the latest news.

Next