Advertisement

ಪಡಿತರ ಚೀಟಿಗೆ ಇ-ಕೆವೈಸಿ: ನಿಯಮ ಸಡಿಲಿಕೆ

12:12 AM Jun 10, 2022 | Team Udayavani |

ಉಡುಪಿ/ಮಂಗಳೂರು : ರಾಜ್ಯದ ಯಾವುದೇ ನ್ಯಾಯಬೆಲೆ ಅಂಗಡಿಗಳಲ್ಲಿ ಪಡಿತರ ಚೀಟಿದಾರರಿಗೆ ಪೋರ್ಟಿಬಿಲಿಟಿ ಮೂಲಕ ಜೂ. 30ರ ಒಳಗೆ ಇ-ಕೆವೈಸಿ ಮಾಡಿಸಲು ಅಂತಿಮ ಅವಕಾಶ ಕಲ್ಪಿಸಲಾಗಿದೆ.

Advertisement

ಕುಟುಂಬದ ಎಲ್ಲ ಸದಸ್ಯರು ಇ-ಕೆವೈಸಿ ಮಾಡಿಸುವುದು ಕಡ್ಡಾಯವಾಗಿದ್ದು, ಈವರೆಗೆ ಪಡಿತರ ಆಹಾರಧಾನ್ಯ ಪಡೆಯುತ್ತಿದ್ದ ಮೂಲ ನ್ಯಾಯಬೆಲೆ ಅಂಗಡಿಗಳಲ್ಲಿ ಮಾತ್ರ ಇ-ಕೆವೈಸಿ ಮಾಡಲು ಇದ್ದ ನಿಯಮವನ್ನು ಸಡಿಲಗೊಳಿಸಲಾಗಿದೆ. ಇದುವರೆಗೂ ಇ-ಕೆವೈಸಿ ಆಗದೇ ಇರುವ ಪಡಿತರ ಚೀಟಿಯ ಸದಸ್ಯರು ರಾಜ್ಯದ ಯಾವುದೇ ನ್ಯಾಯಬೆಲೆ ಅಂಗಡಿಯಲ್ಲಿ ಬೆರಳಚ್ಚು ನೋಂದಾಯಿಸಿಕೊಳ್ಳಬಹುದಾಗಿದೆ (ಆಧಾರ್‌ ದೃಢೀಕರಣ ಇ-ಕೆವೈಸಿ).

ಪರಿಶಿಷ್ಟ ಜಾತಿ ಮತ್ತು ಪಂಗಡಕ್ಕೆ ಸೇರಿದ ಪಡಿತರ ಚೀಟಿದಾರರು ಜಾತಿ ಪ್ರಮಾಣ ಪತ್ರ ಹಾಗೂ ಅನಿಲ ಸಂಪರ್ಕ ಹೊಂದಿರುವ ಪಡಿತರ ಚೀಟಿದಾರರು, ಅನಿಲ ಸಂಪರ್ಕದ ಮಾಹಿತಿ ಮತ್ತು ಮೊಬೈಲ್‌ ಸಂಖ್ಯೆಯನ್ನು ಇ-ಕೆವೈಸಿ ಮಾಡುವ ನ್ಯಾಯಬೆಲೆ ಅಂಗಡಿಗಳಿಗೆ ನೀಡಬೇಕು.

ಜೂ. 30ರ ಒಳಗೆ ಇ-ಕೆವೈಸಿ ಮಾಡಿಸದೆ ಇರುವ ಪಡಿತರ ಚೀಟಿ ಮತ್ತು ಸದಸ್ಯರನ್ನು ರದ್ದು ಪಡಿಸಲಾಗುವುದು ಎಂದು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಉಪನಿರ್ದೇಶಕರ ಪ್ರಕಟನೆ ತಿಳಿಸಿದೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next