Advertisement

ಪಡಿತರ ಅಕ್ರಮ: ವಾರಾಂತ್ಯದಲ್ಲಿ ತಪಾಸಣೆ

11:16 PM Mar 17, 2020 | Lakshmi GovindaRaj |

ವಿಧಾನ ಪರಿಷತ್‌: ಆಹಾರ ಇಲಾಖೆಯ ಪಡಿತರ ವಿತರಣಾ ವ್ಯವಸ್ಥೆಯ ಅಕ್ರಮ ಪತ್ತೆಗೆ ಪ್ರತಿ ವಾರಾಂತ್ಯ ಜಿಲ್ಲೆಗಳಿಗೆ ಭೇಟಿ ನೀಡಲಾಗುತ್ತಿದೆ. ಕೊರೊನಾ ಹಿನ್ನೆಲೆಯಲ್ಲಿ ಈ ವಾರ ಭೇಟಿ ಸಾಧ್ಯವಾಗಿಲ್ಲ ಎಂದು ಆಹಾರ ಸಚಿವ ಕೆ.ಗೋಪಾಲಯ್ಯ ಹೇಳಿದರು.

Advertisement

ಕಾಂಗ್ರೆಸ್‌ ಸದಸ್ಯ ಎನ್‌.ಎಸ್‌.ಬೋಸರಾಜು ಪ್ರಶ್ನೆಗೆ ಉತ್ತರಿಸಿ, ಪ್ರತಿ ವಾರಾಂತ್ಯದಲ್ಲಿ ಒಂದೊಂದು ಜಿಲ್ಲೆಗೆ ಭೇಟಿಕೊಟ್ಟು ತಪಾಸಣೆ ನಡೆಸುತ್ತಿದ್ದೇನೆ. ಕೊರೊನಾ ಹಿನ್ನೆಲೆ ಈ ವಾರ ಭೇಟಿ ನೀಡಲು ಸಾಧ್ಯವಾಗಿಲ್ಲ. ಅಕ್ರಮ ಪತ್ತೆ ಆದಲ್ಲಿ ಕ್ರಮ ಕೈಗೊಳ್ಳುತ್ತೇವೆ ಎಂದರು. ಒಬ್ಬರಿಗೆ ನಾಲ್ಕೈದು ಪಡಿತರ ಚೀಟಿ ನೀಡಿದ ಆರೋಪವಿದೆ.

ಸಾಕಷ್ಟು ಕಡೆ ಈ ಸಮಸ್ಯೆ ಪತ್ತೆ ಮಾಡಿ ಕ್ರಮ ಕೈಗೊಂಡಿದ್ದೇವೆ. ಕರೊನಾ ಭೀತಿ ಹಿನ್ನೆಲೆಯಲ್ಲಿ ಬಯೊಮೆಟ್ರಿಕ್‌ ವ್ಯವಸ್ಥೆಯನ್ನು ತಾತ್ಕಾಲಿಕವಾಗಿ ರದ್ದು ಮಾಡಿದ್ದೇವೆ. ಕಾರ್ಡ್‌ ಆಧಾರದ ಮೇಲೆ ಪಡಿತರ ವಿತರಿಸುವ ಕಾರ್ಯ ಮಾಡುತ್ತೇವೆ. ಜನ ಆತಂಕ ಪಡುವುದು ಬೇಡ ಎಂದು ಭರವಸೆ ನೀಡಿದರು.

Advertisement

Udayavani is now on Telegram. Click here to join our channel and stay updated with the latest news.

Next