Advertisement

ಸರ್ಕಾರದ ವೈಫಲ್ಯ ಖಂಡಿಸಿ ಕಿಮ್ಮನೆ ರತ್ನಾಕರ್ ಬೈಸಿಕಲ್ ಜಾಥಾ

12:43 PM Jul 11, 2020 | Suhan S |

ಹೊಸನಗರ: ಕೋವಿಡ್ ಔಷಧ, ಉಪಕರಣ ಖರೀದಿಯಲ್ಲಿ ಅವ್ಯವಹಾರ, ರೋಗ ನಿಯಂತ್ರಣಕ್ಕೆ ತರುವಲ್ಲಿ ವಿಫಲವಾದ ರಾಜ್ಯ ಹಾಗೂ ಕೇಂದ್ರ ಸರ್ಕಾರದ ಸಚಿವರು ಕೂಡಲೇ ರಾಜೀನಾಮೆ ನೀಡುವಂತೆ ಮಾಜಿ ಸಚಿವ ಕಿಮ್ಮನೆ ರತ್ನಾಕರ ಆಗ್ರಹಿಸಿದರು.

Advertisement

ರಾಜ್ಯ ಹಾಗೂ ಕೇಂದ್ರ ಸರ್ಕಾರದ ವೈಫಲ್ಯ ಖಂಡಿಸಿ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಬೈಸಿಕಲ್‌ ಜಾಥಾ ನಡೆಸಿದ ನಂತರ ನಡೆದ ಸಭೆಯಲ್ಲಿ ಅವರು ಮಾತನಾಡಿದರು. ದೇಶದ ಜನರು ಕೊರೊನಾದಂತಹ ಭೀಕರ ರೋಗದಿಂದ ಬಳಲುತ್ತಿದ್ದಾರೆ. ಇಂತಹ ಸನ್ನಿವೇಶದಲ್ಲಿಯೂ ಸರ್ಕಾರ ಕೋವಿಡ್ ಔಷಧ ಹೆಸರಿನಲ್ಲಿ ಜನರಹಣವನ್ನು ಲೂಟಿ ಮಾಡುತ್ತಿದೆ. ಕೋವಿಡ್ ಔಷಧ, ಬೆಡ್‌, ಪಿಪಿಇ ಕಿಟ್‌ ಖರೀದಿಯಲ್ಲಿ ಕೋಟ್ಯಂತರ ಹಣವನ್ನು ಲೂಟಿ ಮಾಡಲಾಗಿದೆ ಎಂದು ದೂರಿದರು.

ದೇಶವು ಕೋವಿಡ್ ಸಂಕಷ್ಟದಲ್ಲಿದ್ದರೂ ಸಹ ಶಾಸಕ ಆರಗ ಜ್ಞಾನೇಂದ್ರ ಹಾಗೂ ಹರತಾಳು ಹಾಲಪ್ಪ ಶಂಕುಸ್ಥಾಪನೆ, ಉದ್ಘಾಟನೆ ಎಂಬ ನೆಪದಲ್ಲಿ ಲಾಕ್‌ ಡೌನ್‌, ಸೀಲ್‌ ಡೌನ್‌ ಮೀರಿ ನೀತಿ ನಿಯಮ ಗಾಳಿಗೆ ತೂರಿ ರೋಗ ಹೆಚ್ಚಲು ಕಾರಣ ಆಗಿದ್ದಾರೆ ಎಂದರು. ಎಂಪಿಎಂ ಕಾರ್ಖಾನೆ ಮುಳಗಡೆ ಮಾಡಲು ಮುಖ್ಯ ಕಾರಣರಾದ ಶಾಸಕ ಆರಗ ಜ್ಞಾನೇಂದ್ರ ಅವರ ಮೇಲಿನ ರೂ.300 ಕೋಟಿ ಹಗರಣವನ್ನು ಸಿಬಿಐಗೆ ಒಪ್ಪಿಸಬೇಕು ಎಂದು ಒತ್ತಾಯಿಸಿದರು.

ಪಟ್ಟಣದ ಪ್ರಮುಖ ಬೀದಿಯಲ್ಲಿ ಮಾಜಿ ಸಚಿವರ ನೇತೃತ್ವದಲ್ಲಿ ನಡೆದ ಬೈಸಿಕಲ್‌ ಜಾಥಾದಲ್ಲಿ ಪ್ರಮುಖರಾದ ಕಲಗೋಡು ರತ್ನಾಕರ, ಬಿ.ಜಿ. ನಾಗರಾಜ್‌, ಸದಾಶಿವ ಶ್ರೇಷ್ಠಿ, ಚಂದ್ರಮೌಳಿ, ಕುನ್ನೂರು ಮಂಜಪ್ಪ, ಏರಗಿ ಉಮೇಶ, ಪ್ರಭಾಕರ್‌, ಬ್ರಹ್ಮೇಶ್ವರ ಸುಧಿಧೀರ ಮತ್ತಿತರರು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next