Advertisement

ರೌಫೋದ್ದಿನ್‌ ಕಚೇರಿವಾಲೆ ಪದಗ್ರಹಣ

08:54 PM Jul 10, 2021 | Team Udayavani |

ಬೀದರ: ರಾಜ್ಯ ಹಜ್‌ ಸಮಿತಿ ನೂತನ ಅಧ್ಯಕ್ಷ ರೌಫೋದ್ದಿನ್‌ ಕಚೇರಿವಾಲೆ ಬೆಂಗಳೂರಿನಲ್ಲಿ ಪದಗ್ರಹಣ ಮಾಡಿದರು. ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸದಸ್ಯ ಸೂರ್ಯಕಾಂತ ನಾಗಮಾರಪಳ್ಳಿ ನೇತೃತ್ವದಲ್ಲಿ ಜಿಲ್ಲೆಯ ಅನೇಕ ಮುಖಂಡರು ಅವರಿಗೆ ಪುಷ್ಪಗುತ್ಛ ನೀಡಿ ಶುಭ ಕೋರಿದರು.

Advertisement

ಕಚೇರಿವಾಲೆ ಬಿಜೆಪಿ ನಿಷ್ಠಾವಂತ ಕಾರ್ಯಕರ್ತರಾಗಿದ್ದಾರೆ. ಪಕ್ಷ ವಹಿಸಿದ ಹಲವು ಜವಾಬ್ದಾರಿ ಅಚ್ಚುಕಟ್ಟಾಗಿ ನಿಭಾಯಿಸುತ್ತ ಬಂದಿದ್ದಾರೆ. ಅದರ ಫಲಶ್ರುತಿಯಿಂದಾಗಿಯೇ ಅವರಿಗೆ ಈ ಸ್ಥಾನ ಲಭಿಸಿದೆ. ಒಳ್ಳೆಯ ಕಾರ್ಯಗಳ ಮೂಲಕ ಕೀರ್ತಿ ತರಲಿದ್ದಾರೆ ಎಂದು ನಾಗಮಾರಪಳ್ಳಿ ಹೇಳಿದರು. ಸಿಎಂ ಯಡಿಯೂರಪ್ಪ ಹಾಗೂ ಪಕ್ಷದ ಮುಖಂಡರು ನನಗೆ ನೀಡಿರುವ ರಾಜ್ಯ ಹಜ್‌ ಸಮಿತಿ ಅಧ್ಯಕ್ಷ ಸ್ಥಾನದ ಜವಾಬ್ದಾರಿ ಪ್ರಾಮಾಣಿಕವಾಗಿ ನಿಭಾಯಿಸುವೆ. ಈ ಹಿಂದೆ ಹಜ್‌ ಸಮಿತಿ ಸದಸ್ಯನಾಗಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ.

ಈಗ ಅಧ್ಯಕ್ಷನಾಗಿ ಸಮಿತಿಗೆ ಗೌರವ ತರುವ ಕೆಲಸ ಮಾಡಲಿದ್ದೇನೆ. ಹಜ್‌ಗೆ ಹೋಗುವವರಿಗೆ ಎಲ್ಲ ರೀತಿಯ ಸೌಕರ್ಯ ಕಲ್ಪಿಸಲು ಕ್ರಮ ಕೈಗೊಳ್ಳಲಾಗುವುದು. ಯಾತ್ರಿಗಳ ಸುರಕ್ಷತೆಗೆ ಆದ್ಯತೆ ನೀಡಲಾಗುವುದು ಎಂದು ಕಚೇರಿವಾಲೆ ತಿಳಿಸಿದರು. ಈ ವೇಳೆ ಹಜ್‌ ಸಮಿತಿ ಸದಸ್ಯರಾದ ಡಾ| ಮಹಮ್ಮದ್‌ ಕಬೀರ್‌ ಅಹಮ್ಮದ್‌, ಚಾಂದ್‌ ಪಾಷಾ, ಮುಖಂಡರಾದ ಬಸವರಾಜ ಆರ್ಯ, ತರುಣ ಎಸ್‌. ನಾಗಮಾರಪಳ್ಳಿ ಇದ್ದರು.

 

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next