Advertisement

“ಆ ಹುಡುಗನ ಭವಿಷ್ಯದ ಜೊತೆ ಆಟವಾಡುತ್ತಿರುವುದು ಖೇದಕರ” : ನಟಿ ರವೀನಾ ಟಂಡನ್

01:46 PM Oct 08, 2021 | Team Udayavani |

ಮುಂಬೈ:ಶಾರುಖ್ ಖಾನ್ ಪುತ್ರ ಆರ್ಯನ್ ಖಾನ್ ಬಂಧನಕ್ಕೆ ನಟಿ ರವೀನಾ ಟಂಡನ್ ಬೇಸರ ವ್ಯಕ್ತಪಡಿಸಿದ್ದಾರೆ. ಎಲ್ಲಿಯೂ ಕೂಡ ಆರ್ಯನ್ ಖಾನ್ ಹೆಸರು ಉಲ್ಲೇಖಿಸದೆ ಟ್ವೀಟ್ ಮಾಡಿದ್ದಾರೆ.

Advertisement

ಡ್ರಗ್ಸ್ ಸೇವನೆ ಪ್ರಕರಣದಲ್ಲಿ ಎನ್‍ಸಿಬಿ ಅಧಿಕಾರಿಗಳು ಶಾರುಖ್ ಪುತ್ರ ಆರ್ಯನ್ ಖಾನ್ ನನ್ನು ಬಂಧಿಸಿದ್ದಾರೆ. ಗುರುವಾರಷ್ಟೇ ಆತನನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಮುಂಬೈನ ಕಿಲ್ಲಾ ಕೋರ್ಟ್ ಆದೇಶ ಹೊರಡಿಸಿತು. ಇದರ ಬೆನ್ನಲ್ಲೆ ಟ್ವೀಟ್ ಮಾಡಿರುವ ರವೀನಾ, ಈ ವಿಷಯದಲ್ಲಿ ನಡೆಯುತ್ತಿರುವ ರಾಜಕೀಯ ನೋಡಿದರೆ ಅಸಹ್ಯವಾಗುತ್ತಿದೆ. ಆ ಯುವಕನ ಜೀವನ ಮತ್ತು ಭವಿಷ್ಯದ ಜೊತೆ ಆಟವಾಡುತ್ತಿರುವುದು ಖೇದರಕರ ಎಂದಿದ್ದಾರೆ.

ಮುಂಬೈನ ಹಡಗಿನಲ್ಲಿ ಡ್ರಗ್ಸ್ ಪಾರ್ಟಿ ವೇಳೆ ದಾಳಿ ನಡೆಸಿದ ಎನ್‍ಸಿಬಿ ಅಧಿಕಾರಿಗಳು, ಆರ್ಯನ್ ಖಾನ್ ಸೇರಿ 8 ಜನರನ್ನು ಬಂಧಿಸಿದ್ದಾರೆ. ಈತನ ಬಂಧನವನ್ನು ಬಾಲಿವುಡ್‍ನ ಹಲವು ಸೆಲೆಬ್ರಿಟಿಗಳು ಖಂಡಿಸಿದ್ದಾರೆ. ಸುನಿಲ್ ಶೆಟ್ಟಿ, ಸುಸ್ಸೇನ್ ಖಾನ್ ಹಾಗೂ ಹೃತಿಕ್ ರೋಷನ್ ಅವರು ಆರ್ಯನ್ ಖಾನ್ ಬಂಧನಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಸಲ್ಮಾನ್ ಖಾನ್ ಅವರು ಶಾರುಖ್ ಖಾನ್ ಮನೆಗೆ ತೆರಳಿ ಧೈರ್ಯ ತುಂಬಿ ಬಂದಿದ್ದಾರೆ.

ಇನ್ನು ಸುಶಾಂತ್ ಸಿಂಗ್ ರಜಪೂತ್ ಆತ್ಮಹತ್ಯೆ ನಂತರ ಬಾಲಿವುಡ್ ಜೊತೆ ಡ್ರಗ್ಸ್ ಪ್ರಕರಣ ತಳುಕು ಹಾಕಿಕೊಂಡಿತು. ಈ ಪ್ರಕರಣದಲ್ಲಿ ಇದುವರೆಗೆ ಹಲವು ಜನರನ್ನು ಬಂಧಿಸಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next