Advertisement

ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯಾಗಿ ರವಿ ಕುಮಾರ್ ಎಂ.ಆರ್ ಅಧಿಕಾರ ಸ್ವೀಕಾರ

12:49 PM Nov 02, 2022 | Team Udayavani |

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಐಎಎಸ್ ಅಧಿಕಾರಿ ರವಿಕುಮಾರ್ ಎಂ ಆರ್ ಅವರು ನವೆಂಬರ್ 2 ಬುಧವಾರ ಅಧಿಕಾರ ಸ್ವೀಕರಿಸಿದರು.

Advertisement

ಹಿಂದಿನ ಡಿಸಿ ಡಾ.ರಾಜೇಂದ್ರ ಕೆ.ವಿ ಅವರ ವರ್ಗಾವಣೆಯ ಬಳಿಕ ಹೆಚ್ಚುವರಿಯಾಗಿ ಜವಾಬ್ದಾರಿ ವಹಿಸಿಕೊಂಡಿದ್ದ ಡಾ.ಕುಮಾರ್ ಅವರು ರವಿಕುಮಾರ್ ಅವರಿಗೆ ಉಸ್ತುವಾರಿಯನ್ನು ಹಸ್ತಾಂತರಿಸಿದರು.

ರವಿಕುಮಾರ್ ಅವರು 2012 ರ ಬ್ಯಾಚ್‌ನ ಕರ್ನಾಟಕ ಕೇಡರ್‌ನ ಐಎಎಸ್ ಆಗಿದ್ದು,ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ರಿಜಿಸ್ಟ್ರಾರ್ ಆಗಿ ಸೇವೆ ಸಲ್ಲಿಸುತ್ತಿದ್ದರು.

ಇದನ್ನೂ ಓದಿ : ತಮಿಳುನಾಡು: ಭಾರೀ ಮಳೆಗೆ ಹಲವು ಪ್ರದೇಶಗಳು ಜಲಾವೃತ, ಇಬ್ಬರು ಸಾವು, ಶಾಲಾ ಕಾಲೇಜುಗಳಿಗೆ ರಜೆ

Advertisement
Advertisement

Udayavani is now on Telegram. Click here to join our channel and stay updated with the latest news.

Next